ಕರ್ನಾಟಕ

ಅಕ್ರಮ ಆಸ್ತಿಗಳಿಕೆ ಪ್ರಕರಣ : ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಅ. 17ಕ್ಕೆ ಮುಂದೂಡಿಕೆ

Pinterest LinkedIn Tumblr

jayalalitha-cry

ಹೊಸದಿಲ್ಲಿ, ಅ. 13: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​ ಅಕ್ಟೋಬರ್ 17ಕ್ಕೆ ಮುಂದೂಡಿದೆ.

ಜಯಾಲಲಿತಾ ಪರ ವಕೀಲ ಪಾಲಿ ನಾರಿಮನ್ ಶೀಘ್ರ ವಿಚಾರಣೆ ನಡೆಸುವಂತೆ ನ್ಯಾಯಾಪೀಠಕ್ಕೆ ಮನವಿ ಸಲ್ಲಿಸಿದ್ದರು. ಜಯಲಲಿತಾಗೆ ಕರ್ನಾಟಕದ ಹೈಕೋರ್ಟ್​ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಜಯಾ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದು, ತಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಹಿರಿಯ ಪ್ರಜೆ ಮತ್ತು ಮಹಿಳೆ ಎಂಬ ಆಧಾರದ ಮೇಲೆ ತನಗೆ ಜಾಮೀನು ನೀಡಬೇಕು ಎಂದು ಅರ್ಜಿಯಲ್ಲಿ ಜಯಾಲಲಿತಾ ಮನವಿ ಮಾಡಿಕೊಂಡಿದ್ದಾರೆ.

Write A Comment