ಕನ್ನಡ ವಾರ್ತೆಗಳು

ಬ್ಯಾರಿ ಅಕಾಡಮಿಯಿಂದ ರಮಝಾನ್ ಸ್ನೇಹಕೂಟ – ಉಪವಾಸಿಗನ ಹೃದಯ ಶುದ್ಧಿ ಇರಲಿ : ಅಬುಲ್ ವಫಾ ಖಾಸಿಂ ಮುಸ್ಲಿಯಾರ್

Pinterest LinkedIn Tumblr

Beary_Academy_Iftar_1

ಮಂಗಳೂರು, ಜು.11: ಕೇವಲ ಹಸಿವಿನಿಂದ ಇದ್ದರೆ ಅದು ಉಪವಾಸವಾಗುವುದಿಲ್ಲ. ಆರಾಧನೆಯೊಂದಿಗೆ ಉಪವಾಸಿಗನ ಹೃದಯ ಶುದ್ಧಿಯೂ ಇರಬೇಕಾಗಿದೆ. ಅಂತಹ ಉಪವಾಸ ಮಾತ್ರ ಅಲ್ಲಾಹನಿಗೆ ಸ್ವೀಕಾರ್ಹವಾಗಲಿದೆ ಎಂದು ನಗರದ ಪೌಝಿಯಾ ಜುಮಾ ಮಸ್ಜಿದ್‌ನ ಖತೀಬ್ ಅಬುಲ್ ವಫಾ ಖಾಸಿಂ ಮುಸ್ಲಿಯಾರ್ ಹೇಳಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಹಕಾರದೊಂದಿಗೆ ಶುಕ್ರವಾರ ಟಿ‌ಆರ್‌ಎಫ್ ಸಭಾಂಗಣದಲ್ಲಿ ಹಮ್ಮಿಕೊಂಡ `ರಮಝಾನ್ ಸ್ನೇಹಕೂಟ’ದಲ್ಲಿ `ಬ್ಯಾರಿ ಸಂಸ್ಕ್ಕೃತಿ ಮತ್ತು ರಮಝಾನ್ ವ್ರತ’ ವಿಷಯದಲ್ಲಿ ಮಾತನಾಡಿದರು.

ಬ್ಯಾರಿ ಎಂಬುದು ಇಸ್ಲಾಮಿನಿಂದ ಪ್ರತ್ಯೇಕವಾದುದಲ್ಲ. ಇಸ್ಲಾಂ ಮಾತೃಭಾಷೆಯನ್ನು ಪ್ರೀತಿಸಲು ಕಲಿಸುತ್ತದೆ.ಹಾಗಾಗಿ ಪ್ರತಿಯೊಬ್ಬ ಬ್ಯಾರಿ ಮುಸಲ್ಮಾನ ಅಕ್ರಮ,ಅನೀತಿಯಿಂದ ದೂರವಿರಬೇಕು ಮತ್ತು ಮಾತೃಭಾಷೆಯ ಬಗ್ಗೆ ಅಭಿಮಾನ ಪಡಬೇಕು ಎಂದು ಅಬುಲ್ ವಫಾ ಖಾಸಿಂ ಮುಸ್ಲಿಯಾರ್ ಕರೆ ನೀಡಿದರು.

Beary_Academy_Iftar_3

Beary_Academy_Iftar_2 Beary_Academy_Iftar_4 Beary_Academy_Iftar_5 Beary_Academy_Iftar_6 Beary_Academy_Iftar_7 Beary_Academy_Iftar_8 Beary_Academy_Iftar_9 Beary_Academy_Iftar_10 Beary_Academy_Iftar_11 Beary_Academy_Iftar_12 Beary_Academy_Iftar_13 Beary_Academy_Iftar_14 Beary_Academy_Iftar_15 Beary_Academy_Iftar_17 Beary_Academy_Iftar_18 Beary_Academy_Iftar_19 Beary_Academy_Iftar_20

ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ ಮುಮ್ತಾಜ್ ಅಲಿ,ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ ಹಿತವಚನ ನೀಡಿದರು. ಟಿ‌ಆರ್‌ಎಫ್ ಅಧ್ಯಕ್ಷ ರಿಯಾರಜ್ ಕಣ್ಣೂರು ಉಪಸ್ಥಿತರಿದ್ದರು.

ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು. ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿದರು. ಸದಸ್ಯ ಟಿ.ಎ. ಆಲಿಯಬ್ಬ ವಂದಿಸಿದರು. ಟಿ‌ಆರ್‌ಎಫ್ ಗೌರವ ಸಲಹೆಗಾರ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Write A Comment