ಕನ್ನಡ ವಾರ್ತೆಗಳು

ಪಾಲಿಕೆಯ ನೂತನ ಆಯುಕ್ತರಾಗಿ ಡಾ.ಎಚ್.ಎನ್.ಗೋಪಾಲಕೃಷ್ಣ ನೇಮಕ

Pinterest LinkedIn Tumblr

Mcc_HNGopalkrishna

ಮಂಗಳೂರು, ಆ.6: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಡಾ.ಎಚ್.ಎನ್.ಗೋಪಾಲಕೃಷ್ಣರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಮನಪಾ ಆಯುಕ್ತೆಯಾಗಿದ್ದ ಹೆಫ್ಸಿಬಾರಾಣಿ ಕೊರ್ಲಪತಿ ಜೂನ್‌ನಲ್ಲಿ ವರ್ಗಾವಣೆಯಾಗಿದ್ದು, ಕಳೆದ ಎರಡು ತಿಂಗಳಿನಿಂದ ಮನಪಾ ಆಯುಕ್ತರ ಹುದ್ದೆ ಖಾಲಿಯಾಗಿತ್ತು.

ಐಎಎಸ್ ಶ್ರೇಣಿಯ ಹೆಫ್ಸಿಬಾರಾಣಿ 2015ರ ಜನವರಿ 1ರಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತೆಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಮನಪಾ ನೂತನ ಆಯುಕ್ತರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣರವರು ಹಾಸನ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ನೂತನ ಅಪರ ಜಿಲ್ಲಾಧಿಕಾರಿ ನೇಮಕ

ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸದಾಶಿವ ಪ್ರಭುರನ್ನು ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಕುಮಾರ್‌ರನ್ನು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

Write A Comment