ಕರ್ನಾಟಕ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ನಮ್ಮ ದೌರ್ಭಾಗ್ಯ: ಜಗದೀಶ್ ಶೆಟ್ಟರ್

Pinterest LinkedIn Tumblr

shettarಬೆಂಗಳೂರು: ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿರುವುದು ನಮ್ಮ ದೌರ್ಭಾಗ್ಯ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಭಾನುವಾರ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ರೈತ ಚೈತನ್ಯ ಯಾತ್ರೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಜನತಾದಳ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲು ಎರಡು ಬಾರಿ ಪ್ರಯತ್ನ ನಡೆಸಿದ್ದರು. ಆದರೆ ಆ ಪ್ರಯತ್ನದಲ್ಲಿ ಅವರು ವಿಫಲರಾಗಿದ್ದರು ಎಂದು ಹೇಳಿದ್ದಾರೆ.

ಬರಗಾಲ, ಪರಿಹಾರ ಕಾರ್ಯಗಳನ್ನು ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕರ್ನಾಟಕ ಅಭಿವೃದ್ಧಿ ರಾಜ್ಯಗಳ ಪೈಕಿ ಎರಡನೇ ಸ್ಥಾನದಲ್ಲಿತ್ತು. ಇದೀಗ 9ನೇ ಸ್ಥಾನದಲ್ಲಿದೆ. ಸಿದ್ದರಾಮಯ್ಯ ಅವರ ಕೆಟ್ಟ ಆಡಳಿತವೇ ಮುಂದಿನಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ದಾರಿ ಮಾಡಿಕೊಡಲಿದೆ. ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

Write A Comment