
ಮಂಗಳೂರು, ಮಾ.12 : ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘ (ಅಮುಕ್ತ್) ಮತ್ತು ಸಂತ ಅಲೋಶಿಯಸ್ ಕಾಲೇಜು ಸಂಯುಕ್ತಾಶ್ರಯದಲ್ಲಿ ‘ಖಾಸಗಿ ಅನುದಾನಿತ ಕಾಲೇಜುಗಳು: ಕೊಡುಗೆ ಮತ್ತು ಸವಾಲುಗಳು’ ವಿಷಯದ ಬಗ್ಗೆ ಶೈಕ್ಷಣಿಕ ಸಮಾವೇಶ ಶನಿವಾರ ಸಂತ ಅಲೋಶಿಯಸ್ ಕಾಲೇಜಿನ ಫಾ.ಎಲ್.ಎಫ್.ರಸ್ಕಿನ್ಹಾ ಸಭಾಂಗಣದಲ್ಲಿ ನಡೆಯಿತು.

ರಾಜ್ಯ ಉನ್ನತ ಶಿಕ್ಷಣ ಸಚಿವ ಟಿ.ಬಿ. ಜಯಚಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು., ಶಾಸಕ ಜೆ.ಆರ್. ಲೋಬೊ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.