ಕರಾವಳಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ದ.ಕ ಜಿಲ್ಲೆ ಪ್ರಥಮ -ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ

Pinterest LinkedIn Tumblr

ಬೆಂಗಳೂರು / ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ, ಕೊಡಗು ತೃತೀಯ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 91 ಕಾಲೇಜುಗಳು ಶೂನ್ಯ ಫಲಿತಾಂಶ ಬಂದಿದೆ.

ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, 11 ಗಂಟೆಯ ಬಳಿಕ ಸರ್ಕಾರದ ಎರಡು ವೆಬ್‌ಸೈಟ್‌ಗಳಲ್ಲಿ ಫ‌ಲಿತಾಂಶ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಗುರುವಾರ ಆಯಾ ಪಿಯು ಕಾಲೇಜುಗಳಲ್ಲಿ ಫ‌ಲಿತಾಂಶ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆ ಶೇ.90.48ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆಯಲ್ಲಿ ಶೇ.90.35ರಷ್ಟು ವಿದ್ಯಾರ್ಥಿಗಳು ಪಾಸ್. ಕೊಡಗು ಜಿಲ್ಲೆಯಲ್ಲಿ ಶೇ.79.35ರಷ್ಟು ವಿದ್ಯಾರ್ಥಿಗಳು ಪಾಸ್. ಯಾದಗಿರಿ ಜಿಲ್ಲೆಯಲ್ಲಿ ಶೇ.44.16ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.60.54ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಪ್ರಸಕ್ತ ವರ್ಷ 57.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರಿನ ಹಿಂದೂ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಅನಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಅನಿತಾ ಬಸಪ್ಪ ಕೊಟ್ಟೂರು ಬಸ್ ಸ್ಟ್ಯಾಂಡ್ ನಲ್ಲಿ ಬಾಳೆಹಣ್ಣಿನ ವ್ಯಾಪಾರಿಯಾಗಿದ್ದಾರೆ.

ಫಲಿತಾಂಶಕ್ಕೆ ಈ ವೆಬ್ ಸೈಟ್  ಕ್ಲಿಕ್ ಮಾಡಿ :  www.karresults.nic.in ಮತ್ತು www.puc.kar.nic.in ವೆಬ್‌ಸೈಟ್‌ಗಳಲ್ಲಿ ಫ‌ಲಿತಾಂಶ ಲಭ್ಯ

Comments are closed.