ಕರಾವಳಿ

ಉರಿ: ಉಗ್ರರ ದಾಳಿಯಿಂದ ಹುತಾತ್ಮರಾದ ವೀರ ಯೋಧರಿಗೆ ಬಿಜೆಪಿ ವತಿಯಿಂದ ಶೃದ್ಧಾಂಜಲಿ

Pinterest LinkedIn Tumblr

kadri_tribute_12

ಮಂಗಳೂರು: ಜಮ್ಮು ಕಾಶ್ಮೀರದ ಉರಿಯಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಹುತಾತ್ಮರಾದ ಯೋಧರಿಗೆ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಕದ್ರಿ ಯುದ್ಧ ಸ್ಮಾರಕದ ಬಳಿ ಮಂಗಳವಾರ ಸಂಜೆ ಶೃದ್ಧಾಂಜಲಿ ಸಲ್ಲಿಸಲಾಯಿತು.

ಉಗ್ರರ ಕೃತ್ಯದಿಂದ ಹುತಾತ್ಮರಾದ 18 ವೀರ ಯೋಧರಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಯುದ್ಧ ಸ್ಮಾರಕದ ಮುಂದೆ ಮೊಂಬತ್ತಿ ಬೆಳಗಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.

kadri_tribute_1 kadri_tribute_2 kadri_tribute_3 kadri_tribute_4 kadri_tribute_5 kadri_tribute_6 kadri_tribute_7 kadri_tribute_8 kadri_tribute_9 kadri_tribute_10 kadri_tribute_11

ವಿಧಾನ ಪರಿಷತ್ ವಿಪಕ್ಷ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ, ಮಾಜಿ ಶಾಸಕ ಎನ್ ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಂಗಳೂರು ನಗರ ವಿಧಾನ ಸಭಾ ಬಿಜೆಪಿ ಸಮಿತಿ ಅಧ್ಯಕ್ಷ ವೇದವ್ಯಾಸ ಕಾಮತ್, ದ.ಕ.ಜಿಲ್ಲಾ ಸೈನಿಕರ ಸಂಘದ ಮಾಜಿ ಅಧ್ಯಕ್ಷ ವಿಕ್ರಂ ದತ್ತ, ಭಗವಾನ್ ಶೆಟ್ಟಿ, ಮನಪಾ ವಿಪಕ್ಷ ನಾಯಕಿ ರೂಪಾ. ಡಿ ಬಂಗೇರ, ಪಕ್ಷದ ಪ್ರಮುಖರಾದ ರವಿಶಂಕರ್ ಮಿಜಾರ್, ಭಾಸ್ಕರಚಂದ್ರ ಶೆಟ್ಟಿ, ಸದಾನಂದ ನಾವರ ರಮೇಶ್ ಕಂಡೆಟ್ಟು ಹಾಗೂ ಪಕ್ಷದ ಮಹಿಳಾ ಘಟಕದ ಕಾರ್ಯಕರ್ತರು ಸೇರಿದಂತೆ ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.