
ಬೆಂಗಳೂರು: ನಟ ದರ್ಶನ್ ಮನೆ, ಎಸ್ಎಸ್ ಆಸ್ಪತ್ರೆಯಿಂದ ಸರ್ಕಾರಿ ಜಾಗ ಒತ್ತುವರಿಯಾಗಿರುವುದು ಖಾತ್ರಿಯಾಗಿದೆ ಎಂದು ಬೆಂಗಳೂರಿನ ಜಿಲ್ಲಾಧಿಕಾರಿ ವಿ.ಶಂಕರ್ ಸ್ಪಷ್ಟಪಡಿಸಿದ್ದಾರೆ.
ದರ್ಶನ್ ಮತ್ತು ಎಸ್.ಎಸ್. ಆಸ್ಪತ್ರೆಗೆ ಸ್ವಯಂ ತೆರವುಗೊಳಿಸುವಂತೆ 7 ದಿನಗಳ ಕಾಲಾವಕಾಶ ಕೊಡುತ್ತೇವೆ. ಆನಂತರದಲ್ಲಿ ಒತ್ತುವರಿ ಪ್ರದೇಶವನ್ನು ಸರ್ಕಾರ ವಶಕ್ಕೆ ಪಡೆಯಲಾಗುವುದು, ಮುಂದಿನ ಕ್ರಮ ಸರ್ಕಾರಕ್ಕೆ ಬಿಟ್ಟಿದ್ದು ಎಂದು ಡಿಸಿ ಶಂಕರ್ ತಿಳಿಸಿದ್ದಾರೆ
Comments are closed.