
ಉಡುಪಿ: ಅಪಘಾತ ಪಡಿಸಿ ಮರಣಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.
ದಿನಾಂಕ 24-02-2013 ರಂದು ಮಧ್ಯಾಹ್ನ 1.30ಗಂಟೆಗೆ ಮಾರುತಿ ಆಲ್ಟೊ ಕಾರು ನಂ: ಎಂಎಚ್ 01/ಎಎಕ್ಸ್ 5056 ನಂಬರಿನ ಚಾಲಕನಾದ ಮೊಹಿದ್ದೀನ್ ಅಬುಲ್ ರಹಿಮಾನ್ ಕಾಸರಗೋಡ್ , ಕೇರಳ ರಾಜ್ಯ ಈತನು ಅತೀವೇಗ ಹಾಗೂ ನಿರ್ಲಕ್ಷತನದಿಂದ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ತನ್ನ ಕಾರನ್ನು ಚಲಾಯಿಸಿ, ಪಡುಬಿದ್ರೆ ತೆಂಕ ಎರ್ಮಾಳು ಗ್ರಾಮದ ಎರ್ಮಾಳು ಬೋಡ ಶಾಲೆಯ ಹತ್ತಿರ ತೀರ ಬಲ ಭಾಗಕ್ಕೆ ಚಲಾಯಿಸಿ ರಸ್ತೆಯ ಬದಿಯಲ್ಲಿ ನಿಂತಿದ್ದ ಸಾದಿಯಾ ಸದಫ್ ಮತ್ತು ಸಾಹಿಮಾ ಪರ್ವಿನ್ ಎಂಬ ಮಕ್ಕಳಿಗೆ ಡಿಕ್ಕಿ ಹೊಡೆದ ಪರಿಣಾಮ ಸಾಹಿಮಾ ಪರ್ವಿನ್ಗೆ ತೀವ್ರತರದ ಗಾಯವಾಗಿದ್ದು, ಸಾದಿಯಾ ಸದಫ್ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಕಾಪು ಠಾಣೆಯ ಆಗಿನ ವೃತ್ತ ನಿರೀಕ್ಷಕರು ಶಿವಾನಂದ ಎಸ್ ವಾಲೆಕರ್ ಅವರು ತನಿಖೆ ನಡೆಸಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಈ ಪ್ರಕರಣವು ಮಾನ್ಯ ಉಡುಪಿ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಪ್ರಕರಣದಲ್ಲಿ ಸಾಕ್ಷ್ಯ ಹಾಗೂ ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿ ಆರೋಪಿ ವಿರುಧ್ದ ಮೇಲಿನ ಪ್ರಕರಣವು ಸಾಬೀತಾಗಿದೆ ಎಂದು ತೀರ್ಮಾನಿಸಿ ನ್ಯಾಯಾಧೀಶರಾದ ಶ್ರೀಮತಿ ಶೋಭಾ ಇ. ರವರು ಆರೋಪಿಗಳಿಗೆ ಭಾ.ದಂ.ಸಂ ಕಲಂ 279, 338, 304(ಎ) ರಡಿ 1 ವರ್ಷ 3 ತಿಂಗಳು ಶಿಕ್ಷೆ ಮತ್ತು ಒಟ್ಟು ರೂ.2000/-ನ್ನು ದಂಡ ವಿಧಿಸಿ ದಿನಾಂಕ 6-12-2017 ರಂದು ತೀರ್ಪು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕು. ಜಯಂತಿ ಕೆ. ರವರು ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.
Comments are closed.