ರಾಷ್ಟ್ರೀಯ

ಆರುಷಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

Pinterest LinkedIn Tumblr


ಹೊಸದಿಲ್ಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಹೇಮರಾಜ್‌- ಆರುಷಿ ಕೊಲೆ ಪ್ರಕರಣ ಮತ್ತೊಂದು ಟ್ವಿಸ್ಟ್‌ ಪಡೆದಿದ್ದು, ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಹೇಮರಾಜ್‌ ಪತ್ನಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಆರುಷಿ- ಹೇಮರಾಜ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್‌ನಲ್ಲಿ ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್, ಆರುಷಿ ಪೋಷಕರಾದ ಡಾ. ರಾಜೇಶ್ ತಲ್ವಾರ್, ಡಾ ನೂಪುರ್ ತಲ್ವಾರ್ ಅವರನ್ನು ಖುಲಾಸೆಗೊಳಿಸಿತ್ತು. ಆದರೆ ಇದೀಗ ಈ ತೀರ್ಪಿನ ವಿರುದ್ಧ ಹೇಮರಾಜ್ ಪತ್ನಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

2008 ಮೇ 16ರಂದು 14 ವರ್ಷ ಪ್ರಾಯದ ಆರುಷಿಯನ್ನು ಮನೆಯಲ್ಲಿಯೇ ಕತ್ತು ಕೊಯ್ದು ಹತ್ಯೆ ಮಾಡಲಾಗಿತ್ತು. ಮನೆಯ ಕೊಠಡಿಯಲ್ಲಿ ಆರುಷಿ ಶವ ಪತ್ತೆಯಾಗಿತ್ತು. ಇದಾದ 2 ದಿನಗಳ ಬಳಿಕ ಮನೆ ಕೆಲಸದಾತ ಹೇಮರಾಜ್ ಸಹ ಹತ್ಯೆಗೀಡಾಗಿದ್ದ. ಹೇಮರಾಜ್ ಶವ ಮನೆಯ ಟೆರೆಸ್ ನಲ್ಲಿ ಸಿಕ್ಕಿತ್ತು. ಈ ಪ್ರಕರಣ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿತ್ತು.

ಈ ಪ್ರಕರಣದಲ್ಲಿ ಆರುಷಿ ತಂದೆ ತಾಯಿಯನ್ನು ಸಿ.ಬಿ.ಐ. ಕೋರ್ಟ್ ತಪ್ಪಿತಸ್ಥರೆಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್ ಸಾಕ್ಷ್ಯಾಧಾರಗಳ ಕಾರಣದಿಂದ ರಾಜೇಶ್ ತಲ್ವಾರ್ ದಂಪತಿಯನ್ನು ಖುಲಾಸೆಗೊಳಿಸಿತ್ತು.

ತಲ್ವಾರ್ ದಂಪತಿ ನಿರಪರಾಧಿಗಳು ಎಂದಾದರೆ, ಆರುಷಿ ಮತ್ತು ಹೇಮರಾಜ್ ಅವರನ್ನು ಕೊಂದವರು ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಈಗ ಹೇಮರಾಜ್ ಪತ್ನಿ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Comments are closed.