ಕರ್ನಾಟಕ

ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ ಶನಿವಾರದಿಂದ ಮೂರು ತಿಂಗಳು ಬಂದ್

Pinterest LinkedIn Tumblr


ಹಾಸನ: ರಸ್ತೆ ಕಾಂಕ್ರಿಟೀಕರಣ ಕಾರ್ಯ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಮೂರು ತಿಂಗಳವರೆಗೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ -75 ಬಂದ್ ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್​ 13, 2018ರ ವರೆಗೆ ಹೆದ್ದಾರಿ ಬಂದ್​ ಆಗಲಿದ್ದು, ಬದಲಿ ಮಾರ್ಗದಲ್ಲಿ ಸಂಚಾರ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು ಮತ್ತು ಮಂಗಳೂರು ನಡುವಿನ ಮುಖ್ಯ ಸಂಪರ್ಕ ರಸ್ತೆ ಇದಾಗಿದ್ದು, ಹಾಸನ, ಸಕಲೇಶಪುರ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಾಗಿದೆ.

Comments are closed.