ಕರಾವಳಿ

ಕಲ್ಲಡ್ಕದ ಖಲೀಲ್ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ

Pinterest LinkedIn Tumblr

ಮಂಗಳೂರು, ಜನವರಿ. 20: ಜಿಲ್ಲೆಯಲ್ಲಿ ನಡೆಯುತ್ತಿದ್ದ ಕೋಮುಗಲಭೆಗೆ ಸಂಬಂಧಿಸಿ ಜಿಲ್ಲೆಯಿಂದ ಗಡಿಪಾರುಗೊಂಡಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕಲ್ಲಡ್ಕದ ನಿವಾಸಿ ಖಲೀಲ್ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ಶುಕ್ರವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಗಡಿಪಾರು ಆದೇಶವನ್ನು ಪ್ರಶ್ನಿಸಿ ಕಲ್ಲಡ್ಕದ ಖಲೀಲ್ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಅಫೀಲು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಗಡಿಪಾರು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ

ದ.ಕ. ಜಿಲ್ಲೆಯಲ್ಲಿ ನಡೆಯುವ ಕೋಮುಗಲಭೆಗೆ ಮೂಲ ಕಾರಣರಾಗುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಕಳೆದ ತಿಂಗಳು ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲಡ್ಕ ರತ್ನಾಕರ ಶೆಟ್ಟಿ ಹಾಗೂ ಕಲ್ಲಡ್ಕದ ಖಲೀಲ್ ಎಂಬಿಬ್ಬರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಆದೇಶ ಹೊರಡಿಸಿದ್ದರು.

ಆದರೆ ಗಡಿಪಾರು ಅದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೀರಿದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಲಡ್ಕ ರತ್ನಾಕರ ಶೆಟ್ಟಿಯವರ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ಕೆಲ ದಿನಗಳ ಹಿಂದೆ ತಡೆಯಾಜ್ಞೆ ನೀಡಿತ್ತು.

ಇದೀಗ ಗಡಿಪಾರು ಅದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೀರಿದ ಕಲ್ಲಡ್ಕದ ಖಲೀಲ್ ಅವರಿಗೂ ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಖಲೀಲ್ ಪರ ಹೈಕೋರ್ಟ್ ವಕೀಲರಾದ ಲತೀಫ್ ಬೆಂಗಳೂರು ವಾದಿಸಿದ್ದರು.

Comments are closed.