
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ 20 ಶಾಸಕರ ಸದಸ್ಯತ್ವ ರದ್ದು ಮಾಡಬೇಕೆಂದು ಚುನಾವಣೆ ಆಯೋಗ ಸಲ್ಲಿಸಿದ್ದ ಶಿಫಾರಸಿಗೆ ರಾಷ್ಟ್ರಪತಿ ಅಂಕಿತ ಹಾಕಿದ ಬೆನ್ನಲ್ಲೇ ಈಗ ಪಕ್ಷ ಕಾನೂನು ಹೋರಾಟಕ್ಕೆ ಮುಂದಾಗಿದೆ.
20 ಶಾಸಕರ ಸದಸ್ಯತ್ವ ರದ್ದು ಮಾಡಿರುವ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಎಂದು ದಿಲ್ಲಿ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸದಸ್ಯತ್ವ ರದ್ದುಗೊಂಡಿರುವ ಶಾಸಕ ಅಲ್ಕಾ ಲಾಂಬಾ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರಪತಿ ನಿರ್ಧಾರ ದುರದೃಷ್ಟಕರ ಎಂದಿದ್ದಾರೆ.
ನಮ್ಮ ವಾದವನ್ನು ಆಸಲಿಸಲು ಅವಕಾಶವೇ ಸಿಗಲಿಲ್ಲ. ಈಗ ಕಾನೂನಿನ ಕಟಕಟ್ಟೆಗೆ ಪ್ರಕರಣವನ್ನು ಕೊಂಡೊಯ್ಯುತ್ತೇವೆ ಎಂದು ಅವರು ತಿಳಿಸಿದ್ದಾರೆ.
Comments are closed.