ರಾಷ್ಟ್ರೀಯ

ಚುನಾವಣೆ ಗಮನದಲ್ಲಿಟ್ಟುಕೊಂಡು ಬಜೆಟ್‌ ಮಂಡಿಸುವ ಇರಾದೆ ನನಗಿಲ್ಲ. ಅದನ್ನು ಒಪ್ಪುವುದೂ ಇಲ್ಲ: ಮೋದಿ

Pinterest LinkedIn Tumblr


ಹೊಸದಿಲ್ಲಿ: ಯಾವುದೇ ಸಂದರ್ಭದಲ್ಲಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನನ್ನ ಟೈಮ್‌ಟೇಬಲ್‌ ಅಥವಾ ಕಾರ್ಯಕ್ರಮ, ಯೋಜನೆಗಳನ್ನು ಮಾಡುವುದಿಲ್ಲ. ದೇಶದ ಜನರಿಗೆ ಏನು ಬೇಕೋ, ಅವರ ಆಶಯಗಳನ್ನು ಪೂರೈಸುವ ಆಧಾರದ ಮೇಲೆ ಯೋಜನೆ ರೂಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ವಿಜಯ ಕರ್ನಾಟಕ ಸೋದರ ಸಂಸ್ಥೆ ಟೈಮ್ಸ್‌ ನೌ ಸುದ್ದಿ ವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮೋದಿ ಅವರು ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.

ಮುಂದಿನ ಚುನಾವಣೆಗೆ 18 ತಿಂಗಳುಗಳು ಮಾತ್ರ ಬಾಕಿ ಇದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಯೋಜನೆಗಳನ್ನು ರೂಪಿಸುವುದಿಲ್ಲ. ಜನರ ಆಶೋತ್ತರಗಳಿಗೆ ಪೂರಕವಾಗಿ ಯೋಜನೆ ರೂಪಿಸಬೇಕು ಎಂದರು.

ಚುನಾವಣೆ ಮನಸ್ಸಿನಲ್ಲಿಟ್ಟುಕೊಂಡು ಬಜೆಟ್‌ ಮಂಡಿಸುವುದನ್ನು ನಾನು ಒಪ್ಪುವುದಿಲ್ಲ. ಜನರಿಗೆ ಬೇಕಾದ ಬಜೆಟ್‌ ರೂಪಿಸುವುದೇ ನಮ್ಮ ಧ್ಯೇಯ ಎಂದು ಮೋದಿ ಹೇಳಿದ್ದಾರೆ.

Comments are closed.