
ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಚಿತ್ರ ನಟ ಹುಚ್ಚ ವೆಂಕಟ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ.
ಯಾವುದೇ ಪಕ್ಷಗಳು ನನ್ನನ್ನು ಸಂಪರ್ಕಿಸಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ನಾನು ರಾಜರಾಜೇಶ್ವರಿ ನಗರ ನಿವಾಸಿ. ಹೀಗಾಗಿ, ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ನಾನು ಯಾರಿಗೂ ಕುಕ್ಕರ್ ಹಂಚಿಕೆ ಮಾಡುವುದಿಲ್ಲ. ಸ್ವಂತ ಬಲದ ಮೇಲೆ ಗೆದ್ದು ಬರುವ ವಿಶ್ವಾಸವಿದೆ ಎಂದರು.
-ಉದಯವಾಣಿ
Comments are closed.