ಕರ್ನಾಟಕ

ಒಬ್ಬಂಟಿಗರನ್ನು ಗುರಿ ಮಾಡುತ್ತಿದ್ದ ದರೋಡೆ ಗ್ಯಾಂಗ್ ಬಂಧನ

Pinterest LinkedIn Tumblr


ಬೆಂಗಳೂರು: ರಸ್ತೆಯಲ್ಲಿ ಒಬ್ಬಂಟಿಯಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದ ಗ್ಯಾಂಗನ್ನು ನಗರದ ಮಹದೇವಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊಹಮ್ಮದ್ ರಸೂಲ್ (19), ಸಿರಾಜ್ ಶೇಖ್(20), ಅಪ್ಸರ್ ಶೇಖ್ (20) ಮತ್ತು ಪ್ರದೀಪ್ (22) ಬಂಧಿತ ಅರೋಪಿಗಳು. ಬಂಧಿತರು ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ಫೈನ್ ಅರ್ಪಾಟ್ ಮೆಂಟ್ ಬಳಿಯ ನಿರ್ಜನ ಪ್ರದೇಶದಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಮಾರಕಾಸ್ತ್ರಗಳೊಂದಿಗೆ ದರೋಡೆ ನಡೆಸಲು ಸಂಚು ರೂಪಿಸಲು ಕಾಯುತ್ತಿದ್ದ ಆರೋಪಿಗಳ ನಡವಳಿಕೆ ಕುರಿತು ಅನುಮಾನಗೊಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ದರೋಡೆ ನಡೆಸಲು ಸಂಗ್ರಹಿಸಿಟ್ಟಿದ್ದ ಮಾರಕಾಸ್ತ್ರ, ಖಾರದ ಪುಡಿ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 3 ದ್ವಿಚಕ್ರ ವಾಹನ, ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಗ್ಯಾಂಗ್ ನ ಮತ್ತೊಬ್ಬ ದರೋಡೆಕೋರ ಧನರಾಜ್ ಆಯುಧ ಸಮೇತ ಪರಾರಿಯಾಗಿದ್ದಾನೆ. ಸದ್ಯ ಆರೋಪಿ ಧನರಾಜ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Comments are closed.