ಕರ್ನಾಟಕ

ಮಂತ್ರಾಲಯದಲ್ಲಿ ಇಂದಿನಿಂದ 3 ದಿನ ಆರೆಸ್ಸೆಸ್‌ ರಾಷ್ಟ್ರೀಯ ಬೈಠಕ್‌

Pinterest LinkedIn Tumblr


ರಾಯಚೂರು: ಶುಕ್ರವಾರದಿಂದ ಮೂರು ದಿನಗಳ ಕಾಲ ಮಂತ್ರಾಲಯದಲ್ಲಿ ಆರೆಸ್ಸೆಸ್‌ ರಾಷ್ಟ್ರೀಯ ಬೈಠಕ್ ನಡೆಯಲಿದ್ದು, ಸರಸಂಘಚಾಲಕ ಮೋಹನ್ ಭಾಗವತ್‌, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.

ಮೂರು ದಿನಗಳ ಕಾಲ ನಡೆಯಲಿರುವ ಬೈಠಕ್ ಹಿನ್ನೆಲೆಯಲ್ಲಿ ಮಂತ್ರಾಲಯದ ಟಿಟಿಡಿ ಕಲ್ಯಾಣ ಮಂಟಪ ಮತ್ತು ಪ್ರಮುಖರು ವಾಸ್ತವ್ಯ ಹೂಡುವವಸತಿ ಗೃಹಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ದೇಶದ ನಾನಾ ಕಡೆಯಿಂದ ಆಗಮಿಸುವ 100ಕ್ಕೂ ಹೆಚ್ಚಿನ ಆರೆಸ್ಸೆಸ್‌ ಪ್ರಮುಖರು ಬೈಠಕ್‌ನಲ್ಲಿ ಭಾಗಿಯಾಗುತ್ತಾರೆ.

ಶುಕ್ರವಾರ ಬೆಳಗ್ಗೆ 9ಕ್ಕೆ ಆರೆಸ್ಸೆಸ್‌ ವರಿಷ್ಠ ಮೋಹನ್ ಭಾಗವತ್ ಅವರು ಗುರುರಾಯರ ದರ್ಶನ ಪಡೆಯಲಿದ್ದಾರೆ. ನಂತರ ಸಂಜೆ 4ಕ್ಕೆ ಮಾಧ್ಯಮ ಗೋಷ್ಠಿ ನಡೆಸುವ ಸಾಧ್ಯತೆಯಿದೆ. ಮೋಹನ್ ಭಾಗವತ್ ಅವರು ಈಗಾಗಲೇ ಮಂತ್ರಾಲಯ ತಲುಪಿದ್ದಾರೆ.

Comments are closed.