ರಾಷ್ಟ್ರೀಯ

ವಿದ್ಯುಚ್ಛಕ್ತಿ ಮಂಡಳಿಗೆ ವಿಧಿಸಿದ ದಂಡದ ಹಣ ಕೇರಳ ಪ್ರವಾಹ ಸಂತ್ರಸ್ತರಿಗೆ ಕೊಡಿ: ಅಲಹಾಬಾದ್‌ ಹೈಕೋರ್ಟ್‌

Pinterest LinkedIn Tumblr


ಅಲಹಾಬಾದ್‌: ಹಾಪುರ ವಿದ್ಯುಚ್ಛಕ್ತಿ ಮಂಡಳಿಗೆ ವಿಧಿಸಿದ ದಂಡವನ್ನು ಕೇರಳ ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ನೀಡಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ಆದೇಶಿಸಿದೆ.

ನ್ಯಾಯಮೂರ್ತಿ ಶಶಿಕಾಂತ್‌ ಗುಪ್ತ ಹಾಗೂ ನ್ಯಾ. ಅಜಿತ್‌ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಗೌರವ್‌ ಶರ್ಮ ಎಂಬವರು ಮಂಡಳಿ ವಿರುದ್ಧ ಹಾಕಿದ್ದ ಅರ್ಜಿಗೆ ಸಾಕಷ್ಟು ಬಾರಿ ಕೋರ್ಟ್‌ ನೋಟಿಸ್‌ ಜಾರಿ ಮಾಡಿತ್ತಾದರೂ, ಒಬ್ಬರೂ ಸರಿಯಾಗಿ ಉತ್ತರ ನೀಡಿರಲಿಲ್ಲ. ಇದಕ್ಕಾಗಿ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಕೇಶ್‌ ಕುಮಾರ್‌ ಅವರನ್ನು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.

ಅರ್ಜಿ ಸಂಬಂಧಿಸಿದಂತೆ ಸೂಕ್ತ ಪ್ರತಿಕ್ರಿಯೆ ನೀಡದೆ, ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಮಂಡಳಿಗೆ 1 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ ಈ ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಮೂಲಕ ಕೇರಳ ಪ್ರವಾಹ ಸಂತ್ರಸ್ತರಿಗೆ ತಲುಪಿಸಲು ವ್ಯವಸ್ಥೆ ಮಾಡುವಂತೆ ಕೋರ್ಟ್‌ ಆದೇಶಿಸಿ, ಅರ್ಜಿ ವಿಚಾರಣೆಯನ್ನು ಸೆ.11ಕ್ಕೆ ಮುಂದೂಡಿದೆ.

ಹೈಕೋರ್ಟ್‌ ವಿಧಿಸಿದ ದಂಡವನ್ನು ಪ್ರವಾಹ ಸಂತ್ರಸ್ತರಿಗೆ ನೀಡುವಂತೆ ಹೇಳಿದ ಮೊದಲ ಆದೇಶ ಇದಾಗಿದೆ

Comments are closed.