
ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 151 ಅಡಿ ಎತ್ತರದ ಶ್ರೀರಾಮ ದೇವರ ವಿಗ್ರಹಕ್ಕೆ ಈ ವರ್ಷದ ದೀಪಾವಳಿ ವೇಳೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕಳೆದ ವರ್ಷ ದೀಪಾವಳಿಯಂದು ಅಯೋಧ್ಯೆಯಲ್ಲಿ ದೀಪೋತ್ಸವ ನಡೆಸಲಾಗಿತ್ತು. ಸರೆಯು ನದಿ ತೀರದಲ್ಲಿ ಸ್ಥಾಪನೆಯಾಗಲಿರುವ ವಿಗ್ರಹವನ್ನು ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯಡಿ ನಿರ್ಮಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಗ್ರಹ ಸ್ಥಾಪನೆಯ ಸ್ಥಳದ ಆಯ್ಕೆಗಾಗಿ ಫಾಜಿಯಾಬಾದ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಕ್ವೀನ್ ಹು ಸ್ಮರಣಾರ್ಥ ಇರುವ ಜಾಗದಲ್ಲಿ ವಿಗ್ರಹ ನಿರ್ಮಿಸಲು ಸಮಿತಿ ಶಿಫಾರಸು ನೀಡಿದೆ ಎನ್ನಲಾಗಿದೆ. ಈ ಶಿಫಾರಸು ಸರಕಾರದ ಮಟ್ಟದಲ್ಲಿ ಚರ್ಚೆಯಾದ ಬಳಿಕ ಅಂತಿಮ ತೀರ್ಮಾನ ಹೊರಬೀಳಲಿದೆ ಎಂದು ಮೂಲಗಳು ಹೇಳಿವೆ.
ನವ್ಯ ಆಯೋಧ್ಯ ಯೋಜನೆಯಡಿ ಶ್ರೀರಾಮ ದೇವರ ಬೃಹತ್ ವಿಗ್ರಹ ಸ್ಥಾಪನೆಗೆ ಈಗಾಗಲೇ ತಯಾರಿ ಆರಂಭವಾಗಿದ್ದು, ನ.6ರಂದು ಭೂಮಿ ಪೂಜೆ ನಡೆಸಲು ತೀರ್ಮಾನಿಸಲಾಗಿದೆ.
Comments are closed.