
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರದ ವೀಕೆಂಡ್ ಮೋಜಿಗೆ ಮಳೆರಾಯ ಅಡ್ಡಿ ಬಂದಿದ್ದಾನೆ.
ಭಾನುವಾರ ಮಧ್ಯಾಹ್ನದಿಂದಲೇ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ನಾಗರಿಕರು, ವಾಹನ ಸವಾರರು ಮಳೆಯಿಂದ ಭಾರಿ ತೊಂದರೆಗೀಡಾದರು.
ಬೆಂಗಳೂರಿನಲ್ಲಿ ಸಂಜೆಯೂ ಹಲವೆಡೆ ಬಿದ್ದ ಭಾರಿ ಮಳೆಯಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ.
ಮಲ್ಲೇಶ್ವರದಲ್ಲಿ ಮಳೆ, ಗಾಳಿಗೆ ಭಾರಿ ಮರವೊಂದು ಉರುಳಿ ಬಿದ್ದ ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ.
ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಎಂಜಿ ರಸ್ತೆ, ಮಲ್ಲೇಶ್ವರ, ರಾಜಾಜಿನಗರ, ಶ್ರೀನಿವಾಸನಗರ, ಹನುಮಂತನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.
ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿ ವಾಹನ ಸಂಚಾರಕ್ಕೆ ಧಕ್ಕೆಯಾಗಿದೆ.
Comments are closed.