ರಾಷ್ಟ್ರೀಯ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಭಕ್ತರಿಂದ ಬೃಹತ್ ಪ್ರತಿಭಟನೆ

Pinterest LinkedIn Tumblr


ತಿರುವನಂತಪುರಂ: ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ನೀಡಿದ ಆದೇಶಕ್ಕೆ ಕೇರಳಾದ್ಯಂತ ಹಿಂದೂ ಸಮುದಾಯದಿಂದ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿದೆ.

ದೇಗುಲಕ್ಕೆ ಮಹಿಳೆಯರ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಕೇರಳ ಸರಕಾರ ಸರಿಯಾದ ರೀತಿಯಲ್ಲಿ ವಾದ ಮಂಡಿಲಿಲ್ಲ ಎಂದು ಶಬರಿಮಲ ಅಯ್ಯಪ್ಪ ಸೇವಾ ಸಮಾಜಮ್ ಸೇರಿದಂತೆ ಹಲವು ಹಿಂದೂ ಧಾರ್ಮಿಕ ಸಂಘಟನೆಗಳು ಆರೋಪಿಸಿವೆ. ಕೇರಳ ಸರಕಾರ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದೆ ಎಂಬುದು ಇವರ ಆಪಾದನೆಯಾಗಿದೆ.

ಸುಪ್ರೀಂಕೋರ್ಟ್​ನ ತೀರ್ಪಿನ ಮರುಪರಿಶೀಲನೆಗೆ ಮೇಲ್ಮನವಿ ಸಲ್ಲಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಕೇರಳ ಸರಕಾರ ಹಾಗೂ ಟ್ರಾವನ್​ಕೋರ್ ದೇವಸ್ವೋಮ್ ಬೋರ್ಡ್​ಗೆ ನಿವೇದನೆ ಮಾಡಿಕೊಂಡಿವೆ. ಇದಕ್ಕೂ ಮುನ್ನ ಸಾವಿರಾರು ಅಯ್ಯಪ್ಪ ಭಕ್ತರು ಬೃಹತ್ ಮೆರವಣಿಗೆ ನಡೆಸಿದರು.

ಹೆಂಗಸರೂ ಕೂಡ ಬೃಹತ್ ಸಂಖ್ಯೆಯಲ್ಲಿ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಸಾಂಪ್ರದಾಯಿಕವಾಗಿ ಹೆಂಗಸರ ಪ್ರವೇಶಕ್ಕೆ ನಿರ್ಬಂಧವಿದೆ. ಈ ನಿರ್ಬಂಧವನ್ನೇ ಸುಪ್ರೀಂಕೋರ್ಟ್ ಈಗ ಕಿತ್ತುಹಾಕಿ ಆದೇಶ ಹೊರಡಿಸಿದೆ. ಆದರೆ, ದೇಗುಲದ ಸಂಪ್ರದಾಯಕ್ಕೆ ಬಹುತೇಕ ಹಿಂದೂ ಹೆಣ್ಮಕ್ಕಳು ಬೆಂಬಲ ನೀಡಿ, ಸುಪ್ರೀಂ ಆದೇಶವನ್ನು ವಿರೋಧಿಸುತ್ತಿರುವುದು ಗಮನಾರ್ಹ.

Comments are closed.