
ಮಂಗಳೂರು : ಫಲ್ಗುಣಿ ನದಿಯಿಂದ ಕಬ್ಬಿಣದ ದೋಣಿ ಮೂಲಕ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಜಪೆ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಮರಳು ಹಾಗೂ ಮರಳುಗಾರಿಕೆಗೆ ತೊಡಗಿಸಿದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಮಂಗಳೂರು ತಾಲೂಕು ಅಡ್ಡೂರು ಗ್ರಾಮದ ಫಲ್ಗುಣಿ ನದಿಯಿಂದ ಕಬ್ಬಿಣದ ದೋಣಿ ಮೂಲಕ ಮರಳು ತೆಗೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬಜಪೆ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿ ಅಕ್ರಮವಾಗಿ ತೆಗೆಯುತ್ತಿದ್ದ ಮರಳು, ಪೂರ್ತಿ ಮರಳು ತುಂಬಿದ ಕಬ್ಬಿಣದ ದೋಣಿ-1, ಅಲ್ಪಸ್ವಲ್ಪ ಮರಳು ತುಂಬಿದ ಕುರುವ ಕಬ್ಬಿಣದ ದೋಣಿ-1, ಡ್ರೇಜಿಂಗ ಯಂತ್ರವನ್ನು ಅಳವಡಿಸಲು ತಂದಿರುವ ಕೆಂಪು ಬಣ್ಣದ ಕಬ್ಬಿಣದ ದೋಣಿ-1 ಸೇರಿದಂತೆ ಸುಮಾರು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಸ್.ಪರಶಿವಮೂರ್ತಿ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರಾದ ಶಂಕರ ನಾಯರಿ ಪೊಲೀಸ್ ಉಪನಿರೀಕ್ಷಕರು, ಎ.ಎಸ್.ಐ ಪೂವಪ್ಪ. ಠಾಣಾ ಸಿಬ್ಬಂದಿಗಳಾದ ರಾಜೇಶ್, ಅಭಿಷೇಕ್ ಪೂಜಾರಿ ಲಕ್ಷ್ಮಣ್ ಕಾಂಬಳೆ. ಹರಿಪ್ರಸಾದ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಶ್ರೀಮತಿ ಪದ್ಮಶ್ರೀ ,ಕಂದಾಯ ಇಲಾಖೆಯ ನಿರೀಕ್ಷಕರಾದ ಶ್ರೀ ಆಸಿಪ್ ಮತ್ತು ಗ್ರಾಮ ಕರಣಿಕರಾದ ಕು.ಪ್ರಮೀಳಾ ರವರು ಪಾಲ್ಗೊಂಡಿದ್ದರು.
Comments are closed.