
ಮುಂಬೈ: ಪಂಜಾಬ್ ಮತ್ತು ಮಹಾರಾಷ್ಟ್ರ ಬ್ಯಾಂಕ್ (ಪಿಎಂಸಿ) ಮತ್ತೊರ್ವ ಠೇವಣಿದಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ 39 ವರ್ಷದ ವೈದ್ಯೆ ನಿದ್ದೆ ಮಾತ್ರೆಗಳನ್ನು ಸೇವಿಸುವ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಇವರ ಸಾವಿಗೆ, ಬ್ಯಾಂಕ್ ಬಿಕ್ಕಟ್ಟಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ ಬೇಸತ್ತು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುವುದಿಲ್ಲ. ಆದರೆ, ಪಿಎಂಸಿ ಬ್ಯಾಂಕ್ ಬಿಕ್ಕಟ್ಟಿನಿಂದ ಮೃತಪಟ್ಟವರಲ್ಲಿ ಇವರು ಮೂರನೆಯವರು ಎಂದು ಬಿಂಬಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ನಿವೇದಿತಾ ಬಿಜಲಾನಿ (39) ಮೃತಪಟ್ಟ ವೈದ್ಯೆ. ವೆರ್ಸೊವಾ ಮಾಡೆಲ್ ಟೌನ್ನಲ್ಲಿ ಇವರು ತಂದೆಯೊಂದಿಗೆ ವಾಸವಾಗಿದ್ದು. ಸೋಮವಾರ ರಾತ್ರಿಯೇ ಇವರು ನಿದ್ದೆ ಮಾತ್ರೆಗಳನ್ನು ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪಿಎಂಸಿ ಬ್ಯಾಂಕಿನಲ್ಲಿ ನಿವೇದಿತಾ ಅವರ ಖಾತೆ ಇದೆ. ಆದರೆ, ಬ್ಯಾಂಕ್ ಬಿಕ್ಕಟ್ಟಿನ ವಿಚಾರಕ್ಕೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಿವೇದಿತಾ ಕಳೆದ ಕೆಲವು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಕಳೆದ ವರ್ಷ ಮಾರ್ಚ್ನಲ್ಲಿ ಅಮೆರಿಕದಲ್ಲಿ ಇದ್ದಾಗಲೂ ಆತ್ಮಹತ್ಯೆಗೆ ಯತ್ನಿಸಿದ್ದರು. ನಿವೇದಿತಾ ಅವರು ಯುಎಸ್ನಲ್ಲಿ ಮೆಡಿಸನ್ ತರಬೇತಿ ಪಡೆಯುತ್ತಿದ್ದರು. ಮೊದಲ ಗಂಡನಿಗೆ 17 ವರ್ಷದ ಮಗಳಿದ್ದರೆ, ಎರಡನೇ ಗಂಡನಿಂದ 18 ತಿಂಗಳ ಚಿಕ್ಕಮಗುವಿದೆ. ಇವರ ಗಂಡ ಅಮೆರಿಕದ ಪ್ರಜೆಗಳು. ಈ ಸಾವು ಆಕಸ್ಮಿಕ ಎಂದು ಪೊಲೀಸರು ಹೇಳಿದ್ದಾರೆ.
ಪಂಜಾಬ್ ಮತ್ತು ಮಹಾರಾಷ್ಟ್ರ ಕೋಆಪರೇಟಿವ್ (ಪಿಎಂಸಿ) ಬ್ಯಾಂಕ್ನಲ್ಲಿ ಹೂಡಿಕೆ ಮಾಡಿ ಇಕ್ಕಟ್ಟಿಗೆ ಸಿಲುಕಿದ ಇಬ್ಬರು ಠೇವಣಿದಾರರು ಹೃದಯಾಘಾತಕ್ಕೆ ಒಳಗಾಗಿ, ಅಸುನೀಗಿದ್ದಾರೆ. ಇದೀಗ ಮೂರನೇ ಠೇವಣಿದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವ್ಯವಹಾರ ಹಗರಣಕ್ಕೆ ಸಿಲುಕಿರುವ ಪಿಎಂಸಿ ಬ್ಯಾಂಕ್ ಇದೀಗ ಭಾರೀ ನಷ್ಟದಲ್ಲಿದೆ. ಆರ್ಬಿಐನ ನಿರ್ದೇಶನದ ಅಡಿಯಲ್ಲಿರುವ ಈ ಬ್ಯಾಂಕಲ್ಲಿ ಠೇವಣಿದಾರರು ಇಟ್ಟಿರುವ ಹಣದ ಮೊತ್ತ 11,000 ಕೋಟಿ ಇದೆ. ತಮ್ಮ ಹಣ ವಾಪಸ್ ನೀಡುವಂತೆ ಠೇವಣಿದಾರರು ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ಧಾರೆ. ನಿನ್ನೆ ಬೆಳಗ್ಗೆ ಸಂಜಯ್ ಗುಲಾಟಿ ಕೂಡ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಾತ್ರಿ ಮನೆಯಲ್ಲಿ ಊಟ ಮಾಡುವ ವೇಳೆ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆಂದು ಅವರ ಕುಟುಂಬದವರು ತಿಳಿಸಿದ್ದಾರೆ.
Comments are closed.