ಮಂಗಳೂರು, ನವೆಂಬರ್.16 : ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿಯ ಚುನಾಯಿತ ಪ್ರತಿನಿಧಿಗಳ ಅಭಿನಂದನಾ ಸಭೆ ಮತ್ತು ವಿಜಯೋತ್ಸವ ನಗರದ ಕದ್ರಿ ಮೈದಾನದಲ್ಲಿ ಇಂದು (ನವೆಂಬರ್.16) ಸಂಜೆ 5 ಘಂಟೆಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯರವರ ನೇತ್ರತ್ವದಲ್ಲಿ ನಡೆಯಲಿದೆ.
ಮಂಗಳೂರು ಮಹಾ ಜನತೆ, ಭಾರತೀಯ ಜನತಾ ಪಾರ್ಟಿಯ ಅಭಿಮಾನಿ ಮತ್ತು ಹಿತೈಷಿಗಳು, ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಶಾಸಕ ಡಾ.ಭರತ್ ಶೆಟ್ಟಿ ವಿನಂತಿಸಿದ್ದಾರೆ.

Comments are closed.