ಈ ಮೊದಲು ಶಬರಿಮಲೆಯ ದೇವಾಲಯದ ಆವರಣದಲ್ಲಿ ಮೊಬೈಲ್ ಬಳಕೆಗೆ ನಿಷೇಧ ವಿಧಿಸಲಾಗಿತ್ತು. ಆದರೂ ಈ ನಿಷೇಧ ಪರಿಣಾಮಕಾರಿಯಾಗಿ ಇರಲಿಲ್ಲ. ಈಗ ಅಯ್ಯಪ್ಪಸ್ವಾಮಿ ದೇವಾಲಯದ ಆಡಳಿತ ಮಂಡಳಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಿದ್ದು, ಪರಿಣಾಮಕಾರಿ ಕಾನೂನು ಜಾರಿಗೊಳಿಸುವುದಾಗಿ ಸ್ಪಷ್ಟಪಡಿಸಿದೆ.
ಪವಿತ್ರ ಯಾತ್ರಾಸ್ಥಳ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ಭಕ್ತರಿಗೆ ಒಂದು ಶಾಂಕಿಂಗ್ ಸುದ್ದಿಯಿದೆ. ಇನ್ಮುಂದೆ ಶಬರಿಮಲೆಯಲ್ಲಿ ಭಕ್ತರು ಮೊಬೈಲ್ ಬಳಕೆಗೆ ನಿಷೇಧ ಹೇರಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಹಿಂದೆ ನ್ಯಾಯಮೂರ್ತಿ ಪಿ.ಆರ್.ರಾಮನ್ ನೇತೃತ್ವದ ಓಂಬುಡ್ಸ್ ಮನ್ ತಂಡ ಮೊಬಲ್ ಬಳಕೆಯನ್ನು ನಿಯಂತ್ರಿಸುವುದರ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಕೇರಳ ಹೈಕೋರ್ಟ್ ದೇಗುಲದ ಆಡಳಿತ ಮಂಡಳಿಗೆ ಮಾಹಿತಿ ನೀಡಿ

Comments are closed.