
ಬೆಳಗಾವಿ: ಸೇತುವೆ ಮೇಲಿಂದ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ 7 ಮಂದಿ ರೈತರು ಸಾವನ್ನಪ್ಪಿರುವ ದುರಂತ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಖಾನಾಪುರ ತಾಲೂಕಿನ ಇಟಗಿ-ಬೋಗೂರು ಸೇತುವೆ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಆಯತಪ್ಪಿ ಮಗುಚಿ ಬಿದ್ದಿದೆ. ಪರಿಣಾಮ ಟ್ರ್ಯಾಕ್ಟರ್ನಲ್ಲಿದ್ದ ನಾಲ್ವರು ರೈತರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಶೇಖಪ್ಪ ಕೆದಾರಿ(38), ಗುಲಾಬಿ ಹುಣಸಿಕಟ್ಟಿ(35), ಶಾಂತವ್ವ ಅಳಗೋಡಿ(65), ಶಾಂತವ್ವ(63) ಮೃತರು.
ಇನ್ನು ಮೂವರು ರೈತರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಬೋಗೂರು ಗ್ರಾಮ ನಿವಾಸಿಗಳು ಎನ್ನಲಾಗಿದ್ದು, ಇಟಗಿಗೆ ಕಬ್ಬು ಕಟಾವಿಗೆ ತೆರಳುತ್ತಿದ್ದರು. ಈ ಸಂಬಂಧ ನಂದಗಡ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.