ಕರಾವಳಿ

ಕಂಪ್ಯೂಟರ್ ಸೈನ್ಸ್‌ನಲ್ಲಿ ತೃತೀಯ ರ್‍ಯಾಂಕ್ : ಪ್ರೀತಿ ಹೆಬ್ಬಾರ್ ಅವರಿಗೆ ಗೌರವ ಸನ್ಮಾನ

Pinterest LinkedIn Tumblr

ಮಂಗಳೂರು: ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಸ್ಫರ್ಧೆ ಆಕೃತಿ -2020 ಉದ್ಘಾಟನಾ ಸಮಾರಂಭದಲ್ಲಿ ಕಳೆದ ಸಾಲಿನಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ವಿ.ವಿ.ಮಟ್ಟದಲ್ಲಿ ತೃತೀಯ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿ ಪ್ರೀತಿ ಹೆಬ್ಬಾರ್ ಅವರನ್ನು ಗೌರವಿಸಲಾಯಿತು.

ಬೆಂಗಳೂರಿನ ಏಸ್ ಗ್ರೂಫ್ ಆಫ್ ಇಂಡಸ್ಟ್ರೀಸ್ನ ಅಟೋ ಸಿಎನ್ಸಿ ಸಿಇಒ ಎಂ. ವಿನಾಯಕ ಡಿ. ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಉಪಾಧ್ಯಕ್ಷ ಎಂ.ಅಣ್ಣಪ್ಪ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕಾಲೇಜಿನ ಸಂಚಾಲಕ ಎಂ.ಪದ್ಮನಾಭ ಪೈ, ಸಹಿತ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲ ಡಾ. ಗಣೇಶ್ ವಿ.ಭಟ್ ಮತ್ತಿತರರು ಉಪಸ್ಥಿತರಿದ್ದರು.

Comments are closed.