ಕರಾವಳಿ

ಪತ್ರಕರ್ತರ ಸಂಘದಿಂದ ಕ್ರೀಡಾ ಅಂಕಣಕಾರ ಎಸ್ .ಜಗದೀಶ್ಚಂದ್ರ ಅಂಚನ್‌ಗೆ ಕೆ.ಎ. ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿ ಪ್ರದಾನ

Pinterest LinkedIn Tumblr

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದಅತ್ಯುತ್ತಮ ಕ್ರೀಡಾ ವರದಿಗೆ ಕ್ರೀಡಾ ಅಂಕಣಕಾರ ಎಸ್ .ಜಗದೀಶ್ಚಂದ್ರ ಅಂಚನ್ ಗೆ ಕೆ.ಎ. ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು : ಕ್ರೀಡಾ ಅಂಕಣಕಾರ ಶ್ರೀ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಇವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡುವ ಪ್ರತಿಷ್ಠಿತ ‘ ಕೆ.ಎ.ನೆಟ್ಟಕಲಪ್ಪ ರಾಜ್ಯ ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಇವರು ಇತ್ತೀಚಿಗೆ ಮಂಗಳೂರಿನಲ್ಲಿ ಪ್ರದಾನ ಮಾಡಿದರು.

ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಯನ್ನು ಜಗದೀಶ್ಚಂದ್ರ ಅಂಚನ್ ರಾಜ್ಯದ ಉಪಮುಖ್ಯಮಂತ್ರಿಗಳಿಂದ ಪಡೆದುಕೊಂಡರು. ಸುಮಾರು 30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ರಾಜ್ಯ , ಅಂತರ್ ರಾಜ್ಯ ಮಟ್ಟದ ದಿನ ಪತ್ರಿಕೆಗಳಲ್ಲಿ ಹಾಗೂ ವಾರಪತ್ರಿಕೆಗಳಲ್ಲಿ ಇವರು ಗುರುತಿಸಿಕೊಂಡಿದ್ದಾರೆ . ಇವರು ಬರೆದ ಸುಮಾರು ನಾಲ್ಕು ಸಾವಿರಕ್ಕೂ ಮಿಕ್ಕಿದ ಕ್ರೀಡಾ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ .

ಕ್ರೀಡಾ ಬರವಣಿಗೆಗಾಗಿ ಇವರಿಗೆ 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , 2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; ಜಾನಪದ ಕ್ರೀಡೆಗಳ ಬಗ್ಗೆ ಇವರು ಬರೆದ ಕ್ರೀಡಾ ಲೇಖನಗಳಿಗಾಗಿ 2019ರ ಜಾನಪದ ಲೋಕ ರಾಜ್ಯ ಪ್ರಶಸ್ತಿ ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ , ಸಮಾಜ ರತ್ನ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಹಾಗೂ ಸನ್ಮಾನ ಪುರಸ್ಕಾರವನ್ನು ಇವರು ಪಡೆದಿದ್ದಾರೆ .

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರು , ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವರಾದರು ಶ್ರೀ ಬಿ.ರಮಾನಾಥ ರೈ , ಶ್ರೀ ಕೃಷ್ಣ ಜೆ ಪಾಲೇಮಾರ್ , ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಜೆ ಮೊದಲಾದವರು ಉಪಸ್ಥಿತರಿದ್ದರು.

Comments are closed.