ಉಡುಪಿ: ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪ ಬೆಂಕಿ ಅವಘಡ ಸಂಭವಿಸಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂಪರ್ಕ ಜೆರಾಕ್ಸ್ ಅಂಗಡಿಯಲ್ಲಿ ಸಂಜೆ ಇದ್ದಕ್ಕಿದ್ದಂತೆ ಬೆಂಕಿಯ ತಗುಲಿದ ಘಟನೆ ಶನಿವಾರ ಸಂಭವಿಸಿದೆ.
ಶನಿವಾರ ಸಂಜೆ ಏಳು ಗಂಟೆಯ ಸುಮಾರಿಗೆ ಜೆರಾಕ್ಸ್ ಅಂಗಡಿಯನ್ನು ಬಂದ್ ಮಾಡಿ ಮಾಲೀಕರು ಮನೆಗೆ ಹೋಗಿದ್ದ ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ಕೂಡಲೇ ಉಡುಪಿ ನಗರ ಠಾಣೆಗೆ ಮತ್ತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಮತ್ತು ನಗರ ಪೊಲೀಸರು ಬೆಂಕಿ ನಂದಿಸುವ ಕೆಲಸ ನಡೆಸಿದರು. ಮೇಲ್ನೋಟಕ್ಕೆ ಇದು ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿರಬಹುದು ಎನ್ನಲಾಗಿದೆ. ಅಗ್ನಿಶಾಮಕ ದಳದ ಕಾರ್ಯಾಚರಣೆಗೆ ಸ್ಥಳೀಯ ಯುವಕರು ಕೂಡ ಕೈಜೋಡಿಸಿದ್ದಾರೆ
ಘಟನೆಯಲ್ಲಿ ಜೆರಾಕ್ಸ್ ಅಂಗಡಿಯಲ್ಲಿರುವ ಮಶೀನ್ ಗಳು ಅಗಾಧ ಪ್ರಮಾಣದ ಖಾಲಿ ಪೇಪರ್ ಗಳು, ಕೆಲವು ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದೆ.
ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.