ರಾಷ್ಟ್ರೀಯ

ನಿಯಂತ್ರಣಕ್ಕೆ ಬಾರದ ಕೋವಿಡ್‌ ಪ್ರಕರಣಗಳು; ಆ.31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ತಮಿಳುನಾಡು ಸರ್ಕಾರ

Pinterest LinkedIn Tumblr

ಚೆನ್ನೈ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ನಿಯಂತ್ರಣ ಮೀರಿ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಆ.31ರವರೆಗೆ ಲಾಕ್‌ಡೌನ್‌ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಆರೋಗ್ಯ ತಜ್ಞರ ಅಬಿಪ್ರಾಯಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಲ್ಲಿಯವರೆಗೆ ಲಾಕ್‌ಡೌನ್ ಜಾರಿಯಿರುವ ಪ್ರದೇಶಗಳಲ್ಲಿ ಆಗಸ್ಟ್ ಅಂತ್ಯದವರೆಗೆ ಸಂಪೂರ್ಣ ಲಾಕ್‌ಡೌನ್‌ ಇರಲಿದ್ದು, ಭಾನುವಾರಗಳಂದು ಕೂಡ ವಿನಾಯ್ತಿ ಇರುವುದಿಲ್ಲ. ಇತರ ಜಿಲ್ಲೆಗಳಲ್ಲಿ ಸದ್ಯ ಇರುವ ನಿರ್ಬಂಧಗಳೇ ಮುಂದುವರಿಲಿದೆ ಎಂದು ಅವರು ತಿಳಿಸಿದ್ದಾರೆ.

ಜೊತೆಗೆ, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ರಾಜ್ಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದಿದ್ದಾರೆ.

ರಾಜ್ಯದಿಂದ ಹೊರಗೆ ಪ್ರಯಾಣ ಮಾಡುವವರು ಮತ್ತು ಒಳಬರುವವರು ಇ-ಪಾಸ್‌ ಪಡೆಯುವುದು ಕಡ್ಡಾಯ. ಅಂತರಜಿಲ್ಲಾ ಪ್ರಯಾಣಕ್ಕೆ ಕೂಡ ಇದು ಅನ್ವಯವಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

Comments are closed.