ಕರ್ನಾಟಕ

ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ: ಆ.11 ರವರೆಗೆ ರೆಡ್‌ ಅಲರ್ಟ್‌

Pinterest LinkedIn Tumblr

ಬೆಂಗಳೂರು: ಈಗಾಗಲೇ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಲೆನಾಡು ಪ್ರದೇಶದಲ್ಲಂತೂ ಸತತವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡಕುಸಿತ ಉಂಟಾಗುತ್ತಿದೆ. ಹಲವೆಡೆ ರಸ್ತೆ ಸಂಚಾರ ಬಂದ್ ಆಗಿದೆ. ವಿದ್ಯುತ್‌ ಸ್ಥಗಿತಗೊಂಡಿದೆ.

ಈ ಹಿನ್ನೆಲೆಯಲ್ಲಿ ಅತಿವೃಷ್ಟಿಯ ಅವಘಡಕ್ಕೆ ಒಳಗಾಗಿರುವ ರಾಜ್ಯದ ಒಟ್ಟು 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಆ.11ರವರೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜನರು ಎಚ್ಚರಿಕೆಯಿಂದ ಇರಬೇಕು ಎದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಈ ಕುರಿತು ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಕ್ರಮ ಕೈಗೊಳ್ಳುತ್ತಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ರಾಜ್ಯದಲ್ಲಿ ಕಳೆದ ವಾರದಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ 19 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಮಳೆಯಿಂದ ಹಾನಿಗೊಳಗಾದವರಿಗೆ ತತ್‌ಕ್ಷಣದ ಪರಿಹಾರ ಒದಗಿಸುವಂತೆಯೂ ತಿಳಿಸಿದ್ದಾರೆ.

ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ:
1. ಕರಾವಳಿ ಭಾಗ: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಾರಿ ಮಳೆಯಾಗುವುದು ಮುನ್ಸೂಚನೆ ಇದೆ.

  1. ಮಲೆನಾಡು ಭಾಗ: ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ
    3. ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಹಾಗೂ ಕಲಬುರಗಿಯಲ್ಲಿ ಮಧ್ಯಮ ಮಳೆ
    4. ದಕ್ಷಿಣ ಒಳನಾಡು: ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

 

Comments are closed.