ಕರಾವಳಿ

ದ.ಕ.ಜಿಲ್ಲೆಯಲ್ಲಿ ಬುಧವಾರ ಮತ್ತೊಮ್ಮೆ ಕೊರೋನಾ ಮಹಾಸ್ಫೋಟ: 314 ಮಂದಿಯಲ್ಲಿ ಸೋಂಕು ಪತ್ತೆ

Pinterest LinkedIn Tumblr

ಮಂಗಳೂರು, ಆಗಸ್ಟ್.27 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾ ಮಹಾಸ್ಫೋಟಗೊಂಡಿದ್ದು, 314 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹನ್ನೊಂದು ಸಾವಿರದ ಗಡಿ ದಾಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11092ಕ್ಕೆ ಏರಿಕೆಯಾಗಿದೆ.

ಬುಧವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 314 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಬುಧವಾರ ಸೋಂಕಿತರ ಸಂಖ್ಯೆ ಮತ್ತೊಮ್ಮೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ ( 78 )ಮತ್ತೆ ಮುಂದುವರಿದಿದೆ.

ಜಿಲ್ಲೆಯಲ್ಲಿ ಬುಧವಾರದಂದು ಮತ್ತೆ 296 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಗುಣಮುಖರಾದವರ ಒಟ್ಟು ಸಂಖ್ಯೆ 8423ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ 2339 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬುಧವಾರ ಪತ್ತೆಯಾದ ಸೋಂಕಿತರ ಪೈಕಿ 88 ಮಂದಿಯಲ್ಲಿ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 129 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 19 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 78 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಇನ್ನು ಬುಧವಾರದಂದು ಪತ್ತೆಯಾದ ಸೋಂಕಿತರ ಪೈಕಿ 156 ಮಂದಿಯಲ್ಲಿ ಲಕ್ಷಣ ಸಹಿತ ಸೋಂಕು ಪತ್ತೆಯಾಗಿದ್ದು, 158 ಮಂದಿಯಲ್ಲಿ ಲಕ್ಷಣ ರಹಿತ ಸೋಂಕು ಪತ್ತೆಯಾಗಿದೆ.

11 ಮಂದಿ ಸೋಂಕಿಗೆ ಬಲಿ :

ಇನ್ನು ಬುಧವಾರದಂದು ಮತ್ತೆ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ 11 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಒಟ್ಟು ಸಾವಿನ ಸಂಖ್ಯೆ 330ಕ್ಕೆ ಏರಿಕೆಯಾಗಿದೆ.

ಬುಧವಾರವಾರದ ಪ್ರಮುಖ ಅಂಶಗಳು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾ ಮಹಾಸ್ಫೋಟ

ಜಿಲ್ಲೆಯಲ್ಲಿ‌ ಬುಧವಾರ ಬರೋಬ್ಬರಿ 314 ಮಂದಿಗೆ ಕೊರೋನಾ ಪಾಸಿಟಿವ್

ಬುಧವಾರ ಮಂಗಳೂರು ತಾಲೂಕಿನ‌ 215, ಬಂಟ್ವಾಳದ 52,ಬೆಳ್ತಂಗಡಿಯ 10, ಪುತ್ತೂರಿನ 8, ಸುಳ್ಯ 2ಹಾಗೂ ಹೊರ ಜಿಲ್ಲೆಯ 27 ಮಂದಿಗೆ ಕೊರೋನಾ ಪಾಸಿಟಿವ್

ILI ಪ್ರಕರಣದಿಂದ 129 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 88 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 78 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 19 ಮಂದಿಗೆ ಕೊರೋನಾ ಪಾಸಿಟಿವ್

ಬುಧವಾರ ಜಿಲ್ಲೆಯಲ್ಲಿ 296 ಮಂದಿ ಗುಣಮುಖ

ಜಿಲ್ಲೆಯಲ್ಲಿ ಒಟ್ಟು 11,092 ಪಾಸಿಟಿವ್ ಕೇಸ್

ಜಿಲ್ಲೆಯಲ್ಲಿ ಒಟ್ಟು 2,339 ಆಕ್ವೀವ್ ಕೇಸ್

ಜಿಲ್ಲೆಯಲ್ಲಿ ಬುಧವಾರ ಬರೋಬ್ಬರಿ 11 ಮಂದಿ ಕೊರೋನಾ ಮಹಾಮಾರಿಗೆ ಬಲಿ

ಮಂಗಳೂರಿನ ನಾಲ್ವರು, ಬಂಟ್ವಾಳದ ಒಬ್ಬರು ಹಾಗೂ ಹೊರ ಜಿಲ್ಲೆಯ ಆರು ಮಂದಿ ಸಾವು

ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 330ಕ್ಕೆ ಏರಿಕೆ

Comments are closed.