
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಮಹಾಮಾರಿಗೆ 8,324 ಮಂದಿ ತುತ್ತಾಗಿದ್ದು ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,27,076ಕ್ಕೇರಿಕೆಯಾಗಿದೆ.
ಶುಕ್ರವಾರ ಒಂದೇ ದಿನ ಬರೋಬ್ಬರಿ 115 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,483ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 25 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 115 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 8110 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,35,128 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. 86,446 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Comments are closed.