
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಕೇಸಿನ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿದೆ.
ಇದೀಗ ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಕೂಪರ್ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ನೀಡಿರುವ ಹೇಳಿಕೆ ಬಾಲಿವುಡ್ನಲ್ಲಿ ಸಂಚಲನ ಕ್ರಿಯೇಟ್ ಮಾಡಿದೆ .
ಸುಶಾಂತ್ ಸಿಂಗ್ ಪಾರ್ಥೀವ ಶರೀರವನ್ನು ಆಸ್ಪತ್ರೆಗೆ ತಂದಾಗ ಅವರ ಕಾಲು ಮುರಿದಿತ್ತು, ದೇಹದ ಮೇಲೆ ಗಾಯದ ಗುರುತುಗಳಿದ್ದವು, ಅದು ಕೊಲೆ ಅಂತಾ ವೈದ್ಯರು ಹೇಳುತ್ತಿದ್ದನ್ನು ಕೇಳಿಸಿಕೊಂಡ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಹೇಳಿಕೆ ನೀಡಿದ್ದು, ಇದನ್ನು ನ್ಯೂಸ್ ನೇಷನ್ ವರದಿ ಮಾಡಿದೆ.
ಸದ್ಯ ಈ ವಿಡಿಯೋವನ್ನು ಸುಶಾಂತ್ ರಜಪೂತ್ ಸಹೋದರಿ ಶ್ವೇತಾ ಸಿಂಗ್ ಕಿರ್ತಿ ತಮ್ಮ ಟ್ವಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಎಲ್ಲೆಡೆ ಈ ವಿಡಿಯೋ ಹರಿದಾಡುತ್ತಿದೆ.
ಸುಶಾಂತ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಹಿರಿಯ ವೈದ್ಯರು ಅದು ಸೂಸೈಡ್ ಅಲ್ಲ, ಕೊಲೆ ಅಂತ ಹೇಳಿದ್ದರು, ಆದ್ರೆ ಪೊಲೀಸರು ಆತ್ಮಹತ್ಯೆ ಅಂತಾ ಘೋಷಿಸಿದ್ದಾರೆ. ಕಾಲುಗಳನ್ನು ಮುರಿದಿರುವುದನ್ನು ಡಾಕ್ಟರ್ ಕೂಡಾ ಒಪ್ಪಿಕೊಂಡಿದ್ದಾರೆ ಆದರೆ, ಕೇಸ್ ನಲ್ಲಿ ಅದನ್ನು ಬಿಂಬಿಸಿಲ್ಲ ಅಂತಾ ಹೇಳಿದ್ದಾರೆ.
ಸದ್ಯ ಸಿಬಿಐ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಈ ಸಂಬಂಧ ಸುಶಾಂತ್ ಮಾಜಿ ಗೆಳತಿ ರೀಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೌಕಿ ಚಕ್ರವರ್ತಿಯನ್ನು ವಿಚಾರಣೆ ನಡೆಸಿದ್ದಾರೆ.
Comments are closed.