ಕರ್ನಾಟಕ

ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆಗೆ ರಾಜ್ಯ ವಿಧಾನಸಭೆ ಅಂಗೀಕಾರ

Pinterest LinkedIn Tumblr


ಬೆಂಗಳೂರು: ಭೂ ಸುಧಾರಣಾ ಕಾಯ್ದೆ, ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ಮಸೂದೆಗಳನ್ನು ರಾಜ್ಯ ವಿಧಾನಸಭೆ ಅಂಗೀಕರಿಸಿದೆ.

ತೀವ್ರ ವಿರೋಧ ಮತ್ತು ರೈತ ಸಂಘಗಳ ಪ್ರತಿಭಟನೆ ನಡುವೆಯೇ ಭೂಸುಧಾರಣೆ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಅಂಗೀಕರಿಸಿದೆ. ಈ ಎರಡೂ ಕಾಯ್ದೆಗಳನ್ನು ವಿರೋಧಿಸುತ್ತಿರುವ ರೈತ ಸಂಘಟನೆಗಳು ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಇಂದು ರಾಜ್ಯ ಬಂದ್‌ಗೆ ಕರೆ ನೀಡಿವೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ರೈತರ ಸಹಿತ ಬಹುತೇಕರ ವಿರೋಧವಿದೆ. ಯಾವ ಉದ್ದೇಶಕ್ಕಾಗಿ ಭೂ ಸುಧಾರಣೆಗಳ ಕಾಯ್ದೆಯನ್ನು ದೇವರಾಜ ಅರಸು ಅವರು ತಂದಿದ್ದರೋ ಆ ಮೂಲ ಆಶಯಕ್ಕೆ ಇದು ವಿರುದ್ಧವಾಗಿದೆ. ಇದರ ಹಿಂದೆ ಬೇರೆಯದೇ ಉದ್ದೇಶವಿದೆ ಎಂದು ಆರೋಪಿಸಿದರು.

ಅಚ್ಚರಿ ಬೆಳವಣಿಗೆಯಲ್ಲಿ ಈ ಮಸೂದೆಗೆ ಜೆಡಿಎಸ್‌ ಸಹಮತ ವ್ಯಕ್ತಪಡಿಸಿತು. ಆದರೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಈ ಮಸೂದೆಯನ್ನು ಕೊರೊನಾ ಸಂದರ್ಭದಲ್ಲಿ ಅಧ್ಯಾದೇಶ ಮೂಲಕ ತಂದ ಅಗತ್ಯದ ಬಗ್ಗೆ ಪ್ರಶ್ನಿಸಿದರು. ಜಮೀನು ಖರೀದಿ ಮಿತಿ ಹೆಚ್ಚು ಮಾಡಿರುವುದರಿಂದ ಮತ್ತೆ ಜಮೀನ್ದಾರಿ ಪದ್ಧತಿಯತ್ತ ಹೋಗುವಂತಾಗುತ್ತದೆ ಎಂದು ಹೇಳಿದರಾದರೂ ಇದರಿಂದ ರೈತರಿಗೆ ಎಷ್ಟು ಅನುಕೂಲ ಎಂಬ ಬಗ್ಗೆ ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

Comments are closed.