ರಾಷ್ಟ್ರೀಯ

ಭ್ರಷ್ಟಾಚಾರ ಆರೋಪದಡಿ ಬಂಧಿಸಲ್ಪಟ್ಟಿದ್ದ ತಹಶೀಲ್ದಾರ್ ಆತ್ಮಹತ್ಯೆಗೆ ಶರಣು

Pinterest LinkedIn Tumblr


ಹೈದರಾಬಾದ್: ಭ್ರಷ್ಟಾಚಾರ ಆರೋಪದಡಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಎರ್ವಾ ಬಸವರಾಜು ನಾಗರಾಜು ಎಂದು ಗುರುತಿಸಲಾಗಿದೆ, ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆ ಮುಂದುವರಿಸಲಾಗಿದೆ.

ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜೊತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರು ಲಂಚ ಸ್ವೀಕರಿಸುವ ವೇಳೆ ನಾಗರಾಜ್ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.

Comments are closed.