ಕರ್ನಾಟಕ

ಶಾಲಾ-ಕಾಲೇಜು ಆರಂಭಿಸಿದರೆ ಭಾರೀ ಅನಾಹುತ; ಕುಮಾರಸ್ವಾಮಿ ಎಚ್ಚರಿಕೆ

Pinterest LinkedIn Tumblr

ಬೆಂಗಳೂರು; ಈ ಸಮಯದಲ್ಲಿ ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಿಸಿದರೆ ಭಾರೀ ಅನಾಹುತ ಎದುರಿಸಬೇಕಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್…!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್…!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು.

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ.

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ.

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.

Comments are closed.