ಕರ್ನಾಟಕ

ಸರ್ಕಾರದ ಪರ ನಿಂತ ಜೆಡಿಎಸ್: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರ

Pinterest LinkedIn Tumblr


ಬೆಂಗಳೂರು: ವಿಧಾನಪರಿಷತ್‌ನಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ.

ಚರ್ಚೆಯ ಬಳಿಕ ಮಸೂದೆಯನ್ನು ಮತಕ್ಕೆ ಹಾಕುವಂತೆ ಕಾಂಗ್ರೆಸ್ ಒತ್ತಾಯಿಸಿದ ಕಾರಣ ಸಭಾಪತಿ‌ ಮತ ವಿಭಜನೆ ಮಾಡಿದರು. ಮತಕ್ಕೆ ಹಾಕಿದಾಗ 37-21 ಮತಗಳ ಅಂತರದಲ್ಲಿ ಮಸೂದೆ ಅನುಮೋದನೆ ಪಡೆಯಿತು. ಧ್ವನಿ ಮತದ ಒಪ್ಪಿಗೆ ಬೇಡ, ಮತ ವಿಭಜನೆ‌ ಮಾಡಿ ಎಂದು ವಿರೋಧ ಪಕ್ಷ ಸದಸ್ಯರು ಒತ್ತಾಯಿಸಿದರು.

ಮತ ವಿಭಜನೆ ವೇಳೆ ಮರಿತಿಬ್ಬೇಗೌಡ ಅವರನ್ನು ಹೊರತುಪಡಿಸಿದರೆ ಉಳಿದೆಲ್ಲ ಜೆಡಿಎಸ್ ಸದಸ್ಯರು ಮಸೂದೆ ಪರ ಎದ್ದು ನಿಂತು‌ ಬೆಂಬಲ ವ್ಯಕ್ತಪಡಿಸಿದರು.

ನಗೆಗಡಲು: ಸದಸ್ಯರ ಮತ ವಿಭಜನೆ‌ ನಡೆಸಿದ ಸಂದರ್ಭ ಪರ ಹಾಗೂ ವಿರುದ್ಧ ತಲೆ ಎಣಿಕೆ ನಡೆಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಎಡಭಾಗದ ನಾಲ್ಕನೇ ಸಾಲು ಎನ್ನುವ ಬದಲು ಎಡಭಾಗದ ನಾಲ್ಕನೇ ಸೋಲು ಎಂದು ಬಾಯ್ತಪ್ಪಿ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು.

Comments are closed.