
ಮಂಗಳೂರು, ಫೆಬ್ರವರಿ 27 : ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರ ಶಾಸಕರುಗಳ ಸ್ಥಳೀಯ ಪ್ರದೇಶಾಭಿವೃದ್ಧಿಯೋಜನೆಯಡಿಯಲ್ಲಿ ನೀಡಿರುವ ಅನುದಾನಗಳನ್ನು ಪ್ರಸಕ್ತ ವರ್ಷದಲ್ಲಿಯೇ ಅವುಗಳನ್ನು ಬಳಕೆ ಮಾಡಿಕೊಂಡುಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕುಎಂದುಯುವ ಸಬಲೀಕರಣ ಮತ್ತುಕ್ರೀಡೆ ಹಾಗೂ ಯೋಜನೆಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ. ನಾರಾಯಣಗೌಡ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಸಕರ ಪ್ರದೇಶಾಭಿವೃದ್ಧಿಅನುದಾನದ ಬಳಕೆ ಹಾಗೂ ಯುವಸಬಲೀಕರಣ ಮತ್ತುಕ್ರೀಡಾ ಇಲಾಖೆ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ 3 ಜನ ವಿಧಾನ ಪರಿಷತ್ ಸದಸ್ಯರು ಹಾಗೂ 8ನ ಜನ ಶಾಸಕರುಗಳಿದ್ದೂ, ಪ್ರಸ್ತುತ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯೋಜನೆಗೆ 33 ಕೋಟಿರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅವುಗಳಲ್ಲಿ ಅನೇಕ ಪ್ರದೇಶಾಭಿವೃದ್ಧಿ ಕಾರ್ಯಗಳನ್ನು ಕೈಗೊಂಡು, 7 ಕೋಟಿ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿದೆ.ಬಾಕಿ ಉಳಿದ 26 ಕೋಟಿ ಹಣದಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ಪ್ರಗತಿಯನ್ನು ಹೆಚ್ಚಿಸಿ ಶೀಘ್ರವಾಗಿ ಪೂರ್ಣಗೊಳಿಸುವುದರೊಂದಿಗೆ ಪ್ರತಿಶತ 100 ರಷ್ಟು ಹಣ ಬಳಕೆ ಮಾಡಿಕೊಂಡುಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮಾಡಬೇಕು ಎಂದರು.
ಶಾಸಕರುಗಳು ಕಚೇರಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಗಳನ್ನು ರೂಪಿಸಿ ಅಧಿಕಾರಿಗಳಿಗೆ ಆಡಳಿತಾತ್ಮಕ ಅನುಮೋದನೆಗೆ ನೀಡಿದಾಗ ವಿಳಂಬವಿಲ್ಲದೇ ಮಾರ್ಗಸೂಚಿ ಪ್ರಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಸಾರ್ವಜನಿಕರಿಗೆಅಗತ್ಯವಿರುವ ಮೂಲಭೂತ ಸೌಕರ್ಯವನ್ನು ಕಲ್ಪಿಸ ಬೇಕು ಅವಕಾಶ ಮಾಡಿ ಕೊಡಬೇಕು ಎಂದರು.
ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕೆಲವು ಇಲಾಖೆಗಳಲ್ಲಿ ಇಂಜಿನಿಯರ್ಕೊರತೆಇರುವ ಬಗ್ಗೆ ಕೇಳಿ ಬರುತ್ತಿದೆ.ಇದನ್ನು ನೀಗಿಸಲು ತಾತ್ಕಾಲಿಕವಾಗಿ ಹೊರಗುತ್ತಿಗೆಯಲ್ಲಿ ನೇಮಕ ಮಾಡಿಕೊಂಡುಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಚುರುಕುಗೊಳಿಸಬೇಕು ಎಂದರು.
ಈಗಾಗಲೇ ಆಡಳಿತಾತ್ಮಕ ಅನುಮೋದನೆದೊರೆತು 150 ಕೋಟಿರೂ.ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಾಣ ಮಾಡುವಾಗಆಧುನಿಕ ಮೂಲ ಸೌಕರ್ಯವನ್ನೊಳಗೊಂಡಂತೆ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆಒದಗಿಸುವಂತಹರೀತಿಯಲ್ಲಿ ನಿರ್ಮಾಣವನ್ನುಗುಣಮಟ್ಟದೊಂದಿಗೆ ಮಾಡಬೇಕೆಂದುಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಮಾರ್ಟ್ ಸಿಟಿ ಯೊಜನೆಯಡಿ ಮಂಗಳಾ ಕ್ರೀಡಾಂಗಣದಉನ್ನತೀಕರಣಕಾಮಗಾರಿ, ಅಂತರಾಷ್ಟ್ರೀಯ ಮಟ್ಟದ ಈಜುಕೊಳದ ನಿರ್ಮಾಣ ಸೇರಿದಂತೆ, ಉರ್ವದಲ್ಲಿ ಒಳಾಂಗಣ ಕ್ರೀಡಾಂಗಣದ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಉಸ್ತುವಾರಿಯನ್ನು ಜಿಲ್ಲಾಧಿಕಾರಿಗಳು ಮಾಡಬೇಕೆಂದು ಸೂಚನೆ ನೀಡಿದರು.
ಯುವಜನರುಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಅಗತ್ಯವಿರುವಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಿ ಅವರುಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಅನುವು ಮಾಡಿಕೊಡಬೇಕುಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ರತ್ನಾಕರ್ ಹೆಗ್ಗಡೆ, ಅಪರಜಿಲ್ಲಾಧಿಕಾರಿಎಂ.ಜೆರೂಪಾ, ಹಾಗೂ ಜಿಲ್ಲಾ ಸಮನ್ವಯಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
Comments are closed.