ಆರೋಗ್ಯ

ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳ ದಾಖಲಾತಿಗೆ ಆಗ್ರಹಿಸಿದ ಕಾಂಗ್ರೆಸ್

Pinterest LinkedIn Tumblr

ಕುಂದಾಪುರ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳನ್ನು ದಾಖಲಾತಿ ಮಾಡಲು ಕಾಂಗ್ರೆಸ್ ನಿಯೋಗ ಕುಂದಾಪುರ ಸಹಾಯಕ ಕಮೀಷನರ್ ರವರನ್ನು ಭೇಟಿ ಮಾಡಿ ಮನವಿ ನೀಡಿದರು.

ಈ ಮನವಿಗೆ ಸ್ಪಂದಿಸಿದ ಸಹಾಯಕ ಕಮೀಷನರ್ ಮೂರು ನಾಲ್ಕು ದಿನಗಳಲ್ಲಿ,ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಒಳರೋಗಿಗಳ ದಾಖಲಾತಿ ಹಾಗೂ ಇತರೇ ರೋಗಗಳಿಂದ ಬಳಲುತ್ತಿರುವವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು.ಹಳೆ ಕಟ್ಟಡದಲ್ಲಿರುವ ಆಕ್ಸಜಿನ್ ಬೆಡ್ ಗಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಿ ಸಾರ್ವಜನಿಕರ ಸೇವೆಗೆ ಅವಕಾಶ ಮಾಡುಕೊಡುವುದಾಗಿ ಭರವಸೆ ನೀಡಿದರು.

ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷರು,ಪುರಸಭ ಸದಸ್ಯೆ ಪಿ.ದೇವಕಿ ಸಣ್ಣಯ್ಯ,ಪುರಸಭ ಸದಸ್ಯರಾದ ಕೆ.ಜಿ.ನಿತ್ಯಾನಂದ,ಚಂದ್ರಶೇಖರ ಖಾರ್ವಿ,ಶ್ರೀಧರ ಸೇರಿಗಾರ್,ಅಬ್ಬು ಮಹಮ್ಮದ್,ಅಶ್ಪಾಕ್ ಕೋಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.