ಕರಾವಳಿ

ಪತ್ರಕರ್ತರು ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅತೀ ಅಗತ್ಯ : ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಆಯೋಜಿಸಲಾದ ಲಸಿಕಾ ಶಿಬಿರಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ಪತ್ರಕರ್ತರು ಕೋವಿಡ್ ಸಮಯದಲ್ಲಿ ಕೊರೊನ ವಾರಿಯರ್ಸ್ ಅಗಿ ಕಾರ್ಯ ನಿರ್ವಹಿಸಿದ್ದಾರೆ.

ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಈ ಕೊರೊನ ಹಬ್ಬುತ್ತಿರುವ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅತೀ ಅಗತ್ಯವಾಗಿದೆ .ಈ ನಿಟ್ಟಿನಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಂಡಿರುವುದು ಉತ್ತಮ ಕೆಲಸ ಎಂದು ಹೇಳಿದರು .ಮುಂದಿನ ಮೂರು ತಿಂಗಳಿನಲ್ಲಿ ಸರಕಾರ ಎಲ್ಲರಿಗೂ ಲಸಿಕೆ ಹಾಕಿಸಲಿದೆ ಎಂದು ಹೇಳಿದರು .

ಪಾಲಿಕೆ ಸದಸ್ಯ ಮನೋಹರ ಕದ್ರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು .

Comments are closed.