ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಗ್ರಾಮಗಳಲ್ಲಿನ ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಬಂಧಿತ ನೆಟ್ವರ್ಕ್ ಆಪರೇಟರ್ ಸಭೆಯನ್ನು ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ನಡೆಸಿದರು.

ಗ್ರಾಮೀಣ ಭಾಗಗಳನ್ನು ಹೆಚ್ಚು ಒಳಗೊಂಡಿರುವ ಕ್ಷೇತ್ರ ಬೈಂದೂರಾಗಿದ್ದು ಇಲ್ಲಿನ ಬಹಳಷ್ಟು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಇದ್ದು, ಜನರು ಸಂವಹನ ಸಮಸ್ಯೆಯನ್ನು ಎದುರಿಸುತಿದ್ದಾರೆ. ಪ್ರಸ್ತುತ ಲಾಕ್ಡೌನ್ ಕಾರಣದಿಂದ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಣ ಆನ್ಲೈನ್ ಮೂಲಕ ನಡೆಯುತ್ತಿದೆ. ಮೊಬೈಲ್ ನ ಅವಲಂಬಿತ ಪ್ರಸಕ್ತ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಅತಿ ಅಗತ್ಯವಾಗಿದೆ. ನೆಟ್ವರ್ಕ್ ಸಮಸ್ಯೆಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಲ್ಲಿ ನಿಂತುಕೊಳ್ಳುವುದು, ಕಿಲೋಮಿಟರಗಳುಗಟ್ಟಲೆ ಹೋಗಬೇಕಾದ್ದು, ಕಾಡು ಪ್ರಾಣಿಗಳ ಕಾಟ, ಹೀಗೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಸಮಗ್ರ ಬೈಂದೂರಿನ ನೆಟ್ವರ್ಕ್ ಸಮಸ್ಯೆಗೆ ಮುಕ್ತಿ ಕೊಡುವಂತೆ ನೆಟ್ವರ್ಕ್ ಆಪರೇಟರ್ಗಳೊಂದಿಗೆ ಚರ್ಚಿಸಿದ್ದೇನೆ ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.
ಕನ್ವರ್ಷನ್ ಭೂಮಿ ಬೇಕು ಎಂಬ ಕಾರಣಕ್ಕೆ
ಹೊಸದಾಗಿ ಟವರ್ ಮಾಡುವಲ್ಲಿ ಕನ್ವರ್ಷನ್ ಜಾಗಗಳ ಸಮಸ್ಯೆ ಎದುರಾಗುತಿತ್ತು. ಹಾಗಾಗಿ ಅದರಿಂದ ವಿನಾಯತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಮಾತನಾಡಿದ್ದಲ್ಲದೆ ಗ್ರಾಮ ಪಂಚಾಯತ್ ನಿರಪೇಕ್ಷಣಾ ಪತ್ರ ನೀಡಲು ಸಮಸ್ಯೆ ಎದುರಿಸುತಿದ್ದ ಗಂಗೊಳ್ಳಿ, ಕಟ್ಬೆಲ್ತೂರು ಪಂಚಾಯತ್ ಪಿಡಿಓಗಳಿಗೆ ಮಾತನಾಡಿದ್ದು, ಸಮಸ್ಯೆ ಬಗೆಹರಿಸಿ ಶೀಘ್ರ ಅನುಮತಿ ನೀಡುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
Comments are closed.