ಕರಾವಳಿ

ತ್ರಾಸಿ ಗ್ರಾ.ಪಂ ವ್ಯಾಪ್ತಿಯ ಪ.ಜಾತಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಬೈಂದೂರು ಶಾಸಕ

Pinterest LinkedIn Tumblr

ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತಿನ ಪ.ಜಾತಿ ಫಲಾನುಭವಿಗಳಿಗೆ ನಿವೇಶನಾ ಹಕ್ಕುಪತ್ರಗಳನ್ನು ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ವಿತರಣೆ ಮಾಡಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಅರ್ಹ ಆರ್ಥಿಕ ದುರ್ಬಲರನ್ನು ಆಯ್ಕೆ ಮಾಡಿ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ. ಇಂತಹ ಯೋಜನೆಗಳು ಜನರ ಅನುಕೂಲಕ್ಕೆ ಇರುವಂತದ್ದು, ಅದು ಅರ್ಹರನ್ನು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್‌ನಲ್ಲೂ ನಿವೇಶನ ರಹಿತರ ಪಟ್ಟಿಯನ್ನು ಪಡೆದು ನಿವೇಶನ ಹಂಚಿಕೆ ಮಾಡಲಾಗುವುದು‌. ನಮ್ಮ ಸಮಗ್ರ ಬೈಂದೂರಿನ ಸರ್ವ ಜನರು ನಿವೇಶನ ಹೊಂದಬೇಕು, ನಿವೇಶನ ಇಲ್ಲದಿದ್ದವರು ಸಂಖ್ಯೆ ಸಂಪೂರ್ಣ ಶೂನ್ಯ ಆಗಿಸುವುದು ನನ್ನ ಗುರಿ ಎಂದರು.

ಈ ಸಂದರ್ಭದಲ್ಲಿ ತ್ರಾಸಿ ಪಂಚಾಯತ್ ಅಧ್ಯಕ್ಷರಾದ ಗೀತಾ ದೇವಾಡಿಗ ಮತ್ತು ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Comments are closed.