ಉಡುಪಿ: ಭಾನುವಾರ ಉಡುಪಿಯಿಂದ ಅಪಹರಣಗೊಂಡ ಬಾಗಲಕೋಟೆ ಮೂಲದ ದಂಪತಿಯ 2.4 ವರ್ಷದ ಮಗುವನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ರಕ್ಷಿಸಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2.4 ವರ್ಷದ ಮಗುವನ್ನು ರಕ್ಷಿಸಲಾಗಿದ್ದು ಆರೋಪಿ ಪರಶು ಎಂಬಾತನನ್ನು ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ವಶಕ್ಕೆ ಪಡೆದಿದ್ದು ಉಡುಪಿಗೆ ಕರೆ ತಂದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಗೆ ಅವಳಿ-ಜವಳಿ ಮಕ್ಕಳಿದ್ದು, ಒಂದು ಮಗುವನ್ನು ಊರಿನಲ್ಲೇ ಬಿಟ್ಟು ಇನ್ನೊಂದು ಮಗನೊಂದಿಗೆ ಇವರು ಎರಡು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು.
ಲಾಕ್ಡೌನ್ ಸಂದರ್ಭದಲ್ಲಿ ಈ ದಂಪತಿ ಮತ್ತು ಮಗು ಸೇರಿದಂತೆ ಹಲವು ಮಂದಿ ವಲಸೆ ಕಾರ್ಮಿಕರು ಕರಾವಳಿ ಬೈಪಾಸ್ ಬಳಿಯ ಶೆಡ್ನಲ್ಲಿ ಮಲಗುತ್ತಿದ್ದರು. ಇತ್ತೀಚೆಗೆ ಬಾಗಲಕೋಟೆಯ ಪರ್ಸು ಎಂದು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬ ಈ ದಂಪತಿಗೆ ಪರಿಚಯವಾಗಿತ್ತು. ಭಾನುವಾರ ಬೆಳಗ್ಗೆ ಮಗುವನ್ನು ಚಹಾ ಕುಡಿಸಿಕೊಂಡು ಬರುತ್ತೇನೆ ಎಂದು ಮಗುವನ್ನು ಕರೆದುಕೊಂಡು ಹೋದವನು ವಾಪಸ್ ಬಂದಿಲ್ಲ. ಇದೇ ವ್ಯಕ್ತಿ ತನ್ನ ಮಗುವನ್ನು ಅಪಹರಿಸಿಕೊಂಡು ಹೋಗಿರಬಹುದೆಂದು ಭಾರತಿ-ಅರುಣ್ ದಂಪತಿ ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಉಡುಪಿ ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್ ನೇತೃತ್ವದ ತಂಡ ಸಿಸಿ ಟಿವಿ ದ್ರಶ್ಯಾವಳಿಗಳನ್ನು ಆದರಿಸಿ ಪರಶು ಭಾನುವಾರ ಬೆಳಗ್ಗೆ ಕರಾವಳಿ ಬೈಪಾಸ್ ನಿಂದ ಸಿಟಿಬಸ್ ನಲ್ಲಿ ಪ್ರಯಾಣಿಸಿದ್ದು ಅದರಂತೆ ತನಿಖೆ ಚುರುಕುಗೊಳಿಸಿತು. ಬಳಿಕ ಆತ ಕೆಎಸ್ಆರ್ಟಿಸಿ ಬಸ್ ಮೂಲಕ ತೆರಳಿ ಮಗುವಿನೊಂದಿಗೆ ಭಟ್ಕಳದಲ್ಲಿ ಇಳಿದ ಬಗ್ಗೆ ಮಾಹಿತಿ ಪಡೆದು ಉತ್ತರಕನ್ನಡ ಜಿಲ್ಲೆಯ ಪೊಲೀಸರ ಸಹಾಯದೊಂದಿಗೆ ಭಾನುವಾರ ರಾತ್ರಿ ಕುಮಟಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Comments are closed.