ಕರ್ನಾಟಕ

ಕೋವಿಡ್-19 ನಿರ್ವಹಣೆ, ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ 29 ಜಿಲ್ಲೆಗಳಿಗೆ ಸಚಿವರ ನೇಮಕ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲಿಸಲು ನೂತನ ಸಚಿವರುಗಳನ್ನು ಜಿಲ್ಲೆಗಳಿಗೆ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಮುಂದಿನ ಆದೇಶದವರೆಗೂ ಈ ಸಚಿವರು ಆಯಾ ಜಿಲ್ಲೆಗಳ ಕೋವಿಡ್ ನಿರ್ವಹಣೆ ಮತ್ತು ನೆರೆ ಹಾವಳಿ ಪರಿಹಾರ ಕೆಲಸಗಳನ್ನು ಪರಿಶೀಲಿಸಲಿದ್ದಾರೆ.

ಸಚಿವರಿಗೆ ಜಿಲ್ಲೆ ಜವಾಬ್ದಾರಿ ಹಂಚಿಕೆ:
ಗೋವಿಂದ ಎಂ.ಕಾರಜೋಳ-ಬೆಳಗಾವಿ, ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್.ಅಶೋಕ್-ಬೆಂಗಳೂರು ನಗರ ಜಿಲ್ಲೆ, ಬಿ.ಶ್ರೀರಾಮುಲು-ಚಿತ್ರದುರ್ಗ, ವಿ.ಸೋಮಣ್ಣ-ರಾಯಚೂರು, ಉಮೇಶ್ ಕತ್ತಿ-ಬಾಗಲಕೋಟೆ, ಎಸ್.ಅಂಗಾರ-ದಕ್ಷಿಣ ಕನ್ನಡ, ಜೆ.ಸಿ.ಮಾಧುಸ್ವಾಮಿ-ತುಮಕೂರು, ಅರಗ ಜ್ಞಾನೇಂದ್ರ-ಚಿಕ್ಕಮಗಳೂರು, ಡಾ.ಅಶ್ವತ್ಥ ನಾರಾಯಣ-ರಾಮನಗರ, ಸಿ.ಸಿ.ಪಾಟೀಲ್-ಗದಗ.

ಆನಂದ್ ಸಿಂಗ್-ಬಳ್ಳಾರಿ ಮತ್ತು ವಿಜಯನಗರ, ಕೋಟ ಶ್ರೀನಿವಾಸ ಪೂಜಾರಿ-ಕೊಡಗು, ಪ್ರಭು ಚೌಹಾಣ್-ಬೀದರ್, ಮುರುಗೇಶ್ ಆರ್.ನಿರಾಣಿ-ಕಲಬುರಗಿ, ಶಿವರಾಮ್ ಹೆಬ್ಬಾರ್-ಉತ್ತರ ಕನ್ನಡ, ಎಸ್.ಟಿ.ಸೋಮಶೇಖರ್-ಮೈಸೂರು ಮತ್ತು ಚಾಮರಾಜನಗರ, ಬಿ.ಸಿ.ಪಾಟೀಲ್- ಹಾವೇರಿ, ಬಿ.ಎ.ಬಸವರಾಜ-ದಾವಣಗೆರೆ, ಡಾ.ಕೆ.ಸುಧಾಕರ್-ಚಿಕ್ಕಬಳ್ಳಾಪುರ, ಕೆ.ಗೋಪಾಲಯ್ಯ-ಹಾಸನ. ಶಶಿಕಲಾ ಜೊಲ್ಲೆ-ವಿಜಯಪುರ, ಎಂ.ಟಿ.ಬಿ ನಾಗರಾಜ್-ಬೆಂಗಳೂರು ಗ್ರಾಮಾಂತರ, ಡಾ.ನಾರಾಯಣಗೌಡ-ಮಂಡ್ಯ, ಬಿ.ಸಿ.ನಾಗೇಶ್- ಯಾದಗಿರಿ, ವಿ.ಸುನೀಲ್ ಕುಮಾರ್-ಉಡುಪಿ, ಹಾಲಪ್ಪ ಆಚಾರ್-ಕೊಪ್ಪಳ, ಶಂಕರ್ ಪಾಟೀಲ್ ಮುನೇನಕೊಪ್ಪ- ಧಾರವಾಡ, ಮುನಿರತ್ನ-ಕೋಲಾರ.

ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಮತ್ತು ಮಳೆ-ನೆರೆ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ವಿತರಣೆ ಜವಾಬ್ದಾರಿಯನ್ನು ಈ ಸಚಿವರುಗಳಿಗೆ ನೀಡಲಾಗಿದೆ.

Comments are closed.