ಕರ್ನಾಟಕ

ಕುತೂಹಲ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಬಿ.ಎಸ್. ಯಡಿಯೂರಪ್ಪ ಭೇಟಿ

Pinterest LinkedIn Tumblr

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಅವರಿಂದ ಮಾಜಿ ಸಿಎಂ ಭೇಟಿ ಕುತೂಹಲ ಮೂಡಿಸಿದೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿಎಸ್​​​ವೈ ಅವರನ್ನು ಭೇಟಿ ಮಾಡಿದ ನಳೀನ್ ಕುಮಾರ್ ಕಟೀಲ್, ರಾಜ್ಯ ಪ್ರವಾಸ ಕುರಿತು ಚರ್ಚೆ ನಡೆಸಿದ್ದಾರೆ. ಅಧಿವೇಶನ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಲಾಗಿದೆ. ಪಕ್ಷ ಸಂಘಟನೆ ಸಂಬಂಧ ಯಡಿಯೂರಪ್ಪ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದು ಸೋಶಿಯಲ್ ಮಿಡಿಯಾದಲ್ಲಿ ನಳಿನ್ ಬರೆದು ಕೊಂಡಿದ್ದಾರೆ.

Comments are closed.