ಕರಾವಳಿ

ಬಂಟ್ವಾಳ ರಾ. ಹೆದ್ದಾರಿಯ ಮೆಲ್ಕಾರ್ ಜಂಕ್ಷನ್ ಬಳಿ ಲಾರಿ- ಬೈಕ್ ಅಪಘಾತ- ಸವಾರ ಸಾವು

Pinterest LinkedIn Tumblr

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ -75ರ ಮೆಲ್ಕಾರ್ ಜಂಕ್ಷನ್ ನಲ್ಲಿ ಮಂಗಳವಾರ ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರು ನಿವಾಸಿ (36) ಗಣೇಶ್ ಅಪಘಾತದಲ್ಲಿ‌ ಮೃತಪಟ್ಟ ಬೈಕ್ ಸವಾರ.

ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್ ಕಡೆಯಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಿ.ಸಿ.ರೋಡ್ ಕಡೆಯಿಂದ ಬಂದ ಬೈಕ್ ಸವಾರ ಸಜಿಪ ಹೋಗುವ ರಸ್ತೆಗೆ ತಿರುಗಿದ್ದು, ಈ ವೇಳೆ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments are closed.