ಮಂಗಳೂರು: ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬರು ನಿದ್ರಿಸುತ್ತಿದ್ದಾಗ ವೇಳೆಯೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ನ್ (ಪ್ಯಾರಾಮೆಡಿಕ್ ಇಂಟರ್ನ್) ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ ನಂತರ ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.
ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
Comments are closed.