ಕರ್ನಾಟಕ

ಉಕ್ರೇನ್’ನಿಂದ ತಾಯ್ನಾಡು ತಲುಪಿದ ನವೀನ್ ಪಾರ್ಥಿವ ಶರೀರ: ಅಂತಿಮ ನಮನ ಸಲ್ಲಿಸಿದ ಸಿಎಂ

Pinterest LinkedIn Tumblr

ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮಾ.2ರಂದು ಮೃತಪಟ್ಟಿದ್ದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್‌ ಗ್ಯಾನಗೌಡರ ಅವರ ಮೃತದೇಹ 20 ದಿನಗಳ ಬಳಿಕ ತಾಯ್ನಾಡನ್ನು ಸೇರಿದೆ.

ಇಂದು(ಸೋಮವಾರ) ಮುಂಜಾನೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ಮೃತದೇಹಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಗೌರವ ಪೂರ್ವಕ‌ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ್ ಕುಮಾರ್, ಸಲೀಂ ಮುಹಮದ್ ಮತ್ತು ಇತರರು ಉಪಸ್ಥಿತರಿದ್ದರು.

ಬೆಂಗಳೂರಿನಿಂದ ಈಗಾಗಲೇ ನವೀನ್‌ ಗ್ರಾಮಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಗ್ರಾಮವನ್ನು ತಲುಪಲಿದೆ. ನವೀನ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Comments are closed.