ಕರ್ನಾಟಕ

ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ NIA ತನಿಖೆಗೆ

Pinterest LinkedIn Tumblr

ಬೆಂಗಳೂರು: ಶಿವಮೊಗ್ಗದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಗೆ ಸರ್ಕಾರ ವಹಿಸಿದೆ.

ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಎನ್‍ಐಎಗೆ ಪ್ರಕರಣ ಹಸ್ತಾಂತರಿಸಲು ಕೋರಿ ಮನವಿ ಸಲ್ಲಿಸಿ ಪತ್ರ ಬರೆದಿದ್ದರು. ಈಗಾಗಲೇ ಎನ್‍ಐಎ ಈ ಪ್ರಕರಣದ ಕುರಿತು ಎಫ್‍ಐಆರ್ ದಾಖಲಿಸಿಕೊಂಡಿದೆ. ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಎನ್‍ಐಎ ಅಧಿಕಾರಿಗಳು ಆಗಮಿಸಲಿದ್ದಾರೆ.

ಫೆಬ್ರವರಿ 20 ರಂದು ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ನಾಲ್ಕು ಮಂದಿ ಮೈಸೂರು ಕಾರಾಗೃಹಕ್ಕೆ, ನಾಲ್ಕು ಮಂದಿ ಬಳ್ಳಾರಿ ಕಾರಾಗೃಹದಲ್ಲಿರಿಸಲಾಗಿದೆ. ಉಳಿದ ಇಬ್ಬರು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದು, ಅವರನ್ನು ಶೀಘ್ರದಲ್ಲೇ ಬೆಳಗಾವಿ ಕಾರಾಗೃಹಕ್ಕೆ ಸ್ಥಳಾಂತರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಉಗ್ರರ ಕೃತ್ಯ, ಭದ್ರತೆಗೆ ಸಂಬಂಧಿಸಿದ ಪ್ರಕರಣವನ್ನು ಎನ್‍ಐಎ ತನಿಖೆ ನಡೆಸುತ್ತಿದೆ. ಹರ್ಷ ಪ್ರಕರಣದ ಹಿಂದೆ ದೇಶ ವಿರೋಧಿ ಶಕ್ತಿಗಳ ಪಾತ್ರವಿದೆ ಎಂದು ಬಿಜೆಪಿ ಆರೋಪಿಸಿತ್ತು. ಆರಂಭದಲ್ಲಿ ಪೊಲೀಸ್ ತನಿಖೆಗೆ ಸರ್ಕಾರ ಆದೇಶಿಸಿತ್ತು. ಈಗ ಪ್ರಕರಣ ಗಂಭೀರವಾದ ಹಿನ್ನೆಲೆಯಲ್ಲಿ ಸರ್ಕಾರ ಎನ್‍ಐಎಗೆ ವಹಿಸಿದೆ.

Comments are closed.